ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…