ರೈತರ ನಿರಂತರ ಪ್ರತಿಭಟನೆ ರಾಷ್ಟ್ರವ್ಯಾಪಿ ನಡೆದ ನಂತರ ಕಳೆದ ತಿಂಗಳು ರದ್ದುಪಡಿಸಿದ ಮೂರು ಕೃಷಿ ಕಾನೂನುಗಳನ್ನು ಸರ್ಕಾರವು ಮತ್ತೆ ಜಾರಿಗೆ ತರಬಹುದು ಅಥವಾ ಮರು ಪರಿಚಯಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ತಂದಿದ್ದೇವೆ. ಆದರೆ ಕೆಲವರು ಈ ಕಾನೂನುಗಳನ್ನು ಇಷ್ಟಪಡಲಿಲ್ಲ. 7೦ ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿ ಕ್ಷೇತ್ರವೂ ದೊಡ್ಡ ಸುಧಾರಣೆಯಾಗಿದೆ. ರೈತರು ಭಾರತದ ಬೆನ್ನಲುಬು, ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸದೃಢವಾಗುತ್ತದೆ ಎಂದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೃಷಿ ಸಚಿವರು ಸಾರ್ವಜನಿಕವಾಗಿ ವ್ಯತಿರಿಕ್ತವಾಗಿ ಮತ್ತೆ ರೈತರನ್ನು, ರೈತ ಹೋರಾಟವನ್ನು ಅವಮಾನಿಸಿದ್ದಾರೆ. ಸರಕಾರ ಮತ್ತೊಮ್ಮೆ ರೈತ ವಿರೋಧಿ ಕ್ರಮಕ್ಕೆ ಮುಂದಾದರೆ ಅನ್ನದಾತರು ಮತ್ತೆ ಸತ್ಯಾಗ್ರಹಕ್ಕೆ ಮುಂದಾಗುತ್ತಾರೆ . ಮಾತ್ರವಲ್ಲ ಸರಕಾರದ ಅಹಂಕಾರವನ್ನು ಒಮ್ಮೆ ಹತ್ತಿಕ್ಕಿ ಸತ್ಯಾಗ್ರಹ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…