Advertisement
ನಿಧನ‌ ಸುದ್ದಿಗಳು

ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

Share

‘ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯುತ್ತವೆ’ ಮೆಟ್ರೊದಲ್ಲಿ(Metro) ಪ್ರಯಾಣಿಸುವವರಿಗೆ ಚಿರಪರಿಚಿತ ಧ್ವನಿಯಿದು(Voice). ಗುರುವಾರ ರಾತ್ರಿ ಈ ಧ್ವನಿ ಮೆಟ್ರೋದಲ್ಲಿ ಮೊಳಗುತ್ತಲೇ ಇತ್ತು. ಆದರೆ ಆ ಶಾರೀರದ ಹಿಂದಿನ ಶರೀರವನ್ನು ಮಾತ್ರ ಅಪರ್ಣಾ(Aparna) ತೊರೆದಿದ್ದರು. ಕಲಾವಿದೆಯಾಗಿ(Actress), ನಿರೂಪಕಿಯಾಗಿ(Anchor) ಮನೆಮಾತಾಗಿದ್ದ ಅಪರ್ಣಾ ಇನ್ನು ನೆನಪು ಮಾತ್ರ.

Advertisement
Advertisement

ದೀರ್ಘಕಾಲದ ಶ್ವಾಸಕೋಶದ ಕ್ಯಾನ್ಸರ್‌ನಿಂದ(Cancer) ಬಳಲುತ್ತಿದ್ದ ಅಪರ್ಣಾ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

Advertisement

ಅಚ್ಚ ಕನ್ನಡದ ನಿರೂಪಕಿ ಎಂದೇ ಹೆಸರಾಗಿದ್ದ ಅಪರ್ಣಾ ವಸ್ತಾರೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ನಿರೂಪಕಿ ಕಾಣಿಸಿಕೊಂಡಿದ್ದರು. ನಿರೂಪಕಿಯಾಗಿ ಸರಿಸುಮಾರು ಮೂರು ದಶಕಗಳನ್ನು ಪೂರೈಸಿರುವ ಅಪರ್ಣಾ ನಟಿಯಾಗಿಯೂ ಕನ್ನಡಿಗರಿಗೆ ಚಿರಪರಿಚಿತರು. ಮುಕ್ತ–ಮುಕ್ತ, ಮೂಡಲಮನೆ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಇವರು, ಮಸಣದ ಹೂವು ಚಿತ್ರದ ಮೂಲಕ ಬೆಳ್ಳಿ ತರೆಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಪರ್ಣಾ ಬಣ್ಣ ಹಚ್ಚಿದ್ದರು. ಗಂಭೀರ ನಿರೂಪಕಿಯಾಗಿದ್ದ ಅಪರ್ಣಾ ಅವರ ಹೊಸ ಮುಖ ತೆರೆದುಕೊಂಡಿದ್ದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಟಾಕೀಸ್‌ ಮೂಲಕ. ವರಲಕ್ಷ್ಮಿ ಪಾತ್ರದಲ್ಲಿ ಹಾಸ್ಯ ಭರಿತವಾಗಿ ನಟಿಸಿ ಕನ್ನಡದ ಮನಸ್ಸುಗಳಿಗೆ ಕಚಗುಳಿ ಇಟ್ಟಿದ್ದರು.

ಇನ್ನು ಬೆಂಗಳೂರಿಗರಿಗೆ ಅದರಲ್ಲೂ ಮೆಟ್ರೊ ಪ್ರಯಾಣಿಕರಿಗೆ ಅಪರ್ಣಾ ಧ್ವನಿ ದಿನನಿತ್ಯದ ಆಲಾಪ. 2011ರಲ್ಲಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಆರಂಭವಾಯಿತು. ಅಂದಿನಿಂದ ಇಂದಿನವರೆಗೂ ಮೆಟ್ರೊ ರೈಲಿನ ಪ್ರಕಟಣೆಗಳಲ್ಲಿ ಕೇಳಿಸುವುದು ಅಪರ್ಣಾ ಧ್ವನಿ. ಮೆಟ್ರೊ ಹತ್ತುವ, ಇಳಿಯುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡುವ ಘೋಷಣೆಗಳು ಕೇಳಿಬರುತ್ತಿದ್ದುದು ಅಪರ್ಣಾ ಅವರದ್ದೇ. ಆದರೆ ಇಂದು ಆ ಮಧುರ ಧ್ವನಿ ಹೊತ್ತ ಶರೀರ ಇಹಲೋಕ ತ್ಯಜಿಸಿದೆ. ಕೇಳುಗರಿಗೆ ಆಲಾಪ ಮಾತ್ರ ಶಾಶ್ವತವಾಗಿ ಉಳಿದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗ ಮಾಹಿತಿಯ ಸೇವೆ | ಪುತ್ತಿಲ ಪರಿವಾರದಿಂದ ಯುವಕರಿಗೆ ಉದ್ಯೋಗದ ದಾರಿ |

ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಕಳೆದ ಕೆಲವು ಸಮಯಗಳಿಂದ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಮಾರ್ಚ್‌…

1 hour ago

ಹವಾಮಾನ ವರದಿ | 12.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

13.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

12 hours ago

ಧರ್ಮಕ್ಕೆ ಸಿಗುವುದಾದರೆ ಇರಲಿ ಎಂಬ ಮನೋಭಾವ

ದುಡ್ಡು ಕೊಡದೆ ಸಿಗುತ್ತದೆಂದಾದರೆ ತಾನೆಷ್ಟು ತೆಗೆದುಕೊಳ್ಳಬೇಕು? ತನಗೆಷ್ಟು ಬೇಕು? ಎಂಬುದರ ವಿವೇಚನೆ ಬೇಕು.

1 day ago

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ

ಪ್ಲಾಸ್ಟಿಕ್ ಮರು ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ವಿಧಾನಸಭಾ ಅಧ್ಯಕ್ಷ…

1 day ago

ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ | ಪ್ರಧಾನಿ ಮೋದಿ |

ಇಡೀ ವಿಶ್ವ ಇಂದು  ಹವಾಮಾನ ವೈಪರೀತ್ಯಕ್ಕೆ  ಒಳಗಾಗಿದೆ.  ಜಗತ್ತನ್ನು  ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ…

1 day ago

ರೈತರಿಗೆ ತಾಳೆ ಬೆಳೆ ಜಾಗೃತಿ ಮೂಡಿಸುವಂತೆ ಸಚಿವರಿಂದ ಅಧಿಕಾರಿಗಳಿಗೆ ಸೂಚನೆ

ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ…

1 day ago