Advertisement
ನಿಧನ‌ ಸುದ್ದಿಗಳು

ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

Share

‘ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯುತ್ತವೆ’ ಮೆಟ್ರೊದಲ್ಲಿ(Metro) ಪ್ರಯಾಣಿಸುವವರಿಗೆ ಚಿರಪರಿಚಿತ ಧ್ವನಿಯಿದು(Voice). ಗುರುವಾರ ರಾತ್ರಿ ಈ ಧ್ವನಿ ಮೆಟ್ರೋದಲ್ಲಿ ಮೊಳಗುತ್ತಲೇ ಇತ್ತು. ಆದರೆ ಆ ಶಾರೀರದ ಹಿಂದಿನ ಶರೀರವನ್ನು ಮಾತ್ರ ಅಪರ್ಣಾ(Aparna) ತೊರೆದಿದ್ದರು. ಕಲಾವಿದೆಯಾಗಿ(Actress), ನಿರೂಪಕಿಯಾಗಿ(Anchor) ಮನೆಮಾತಾಗಿದ್ದ ಅಪರ್ಣಾ ಇನ್ನು ನೆನಪು ಮಾತ್ರ.

ದೀರ್ಘಕಾಲದ ಶ್ವಾಸಕೋಶದ ಕ್ಯಾನ್ಸರ್‌ನಿಂದ(Cancer) ಬಳಲುತ್ತಿದ್ದ ಅಪರ್ಣಾ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

ಅಚ್ಚ ಕನ್ನಡದ ನಿರೂಪಕಿ ಎಂದೇ ಹೆಸರಾಗಿದ್ದ ಅಪರ್ಣಾ ವಸ್ತಾರೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ನಿರೂಪಕಿ ಕಾಣಿಸಿಕೊಂಡಿದ್ದರು. ನಿರೂಪಕಿಯಾಗಿ ಸರಿಸುಮಾರು ಮೂರು ದಶಕಗಳನ್ನು ಪೂರೈಸಿರುವ ಅಪರ್ಣಾ ನಟಿಯಾಗಿಯೂ ಕನ್ನಡಿಗರಿಗೆ ಚಿರಪರಿಚಿತರು. ಮುಕ್ತ–ಮುಕ್ತ, ಮೂಡಲಮನೆ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಇವರು, ಮಸಣದ ಹೂವು ಚಿತ್ರದ ಮೂಲಕ ಬೆಳ್ಳಿ ತರೆಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಪರ್ಣಾ ಬಣ್ಣ ಹಚ್ಚಿದ್ದರು. ಗಂಭೀರ ನಿರೂಪಕಿಯಾಗಿದ್ದ ಅಪರ್ಣಾ ಅವರ ಹೊಸ ಮುಖ ತೆರೆದುಕೊಂಡಿದ್ದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಟಾಕೀಸ್‌ ಮೂಲಕ. ವರಲಕ್ಷ್ಮಿ ಪಾತ್ರದಲ್ಲಿ ಹಾಸ್ಯ ಭರಿತವಾಗಿ ನಟಿಸಿ ಕನ್ನಡದ ಮನಸ್ಸುಗಳಿಗೆ ಕಚಗುಳಿ ಇಟ್ಟಿದ್ದರು.

ಇನ್ನು ಬೆಂಗಳೂರಿಗರಿಗೆ ಅದರಲ್ಲೂ ಮೆಟ್ರೊ ಪ್ರಯಾಣಿಕರಿಗೆ ಅಪರ್ಣಾ ಧ್ವನಿ ದಿನನಿತ್ಯದ ಆಲಾಪ. 2011ರಲ್ಲಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಆರಂಭವಾಯಿತು. ಅಂದಿನಿಂದ ಇಂದಿನವರೆಗೂ ಮೆಟ್ರೊ ರೈಲಿನ ಪ್ರಕಟಣೆಗಳಲ್ಲಿ ಕೇಳಿಸುವುದು ಅಪರ್ಣಾ ಧ್ವನಿ. ಮೆಟ್ರೊ ಹತ್ತುವ, ಇಳಿಯುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡುವ ಘೋಷಣೆಗಳು ಕೇಳಿಬರುತ್ತಿದ್ದುದು ಅಪರ್ಣಾ ಅವರದ್ದೇ. ಆದರೆ ಇಂದು ಆ ಮಧುರ ಧ್ವನಿ ಹೊತ್ತ ಶರೀರ ಇಹಲೋಕ ತ್ಯಜಿಸಿದೆ. ಕೇಳುಗರಿಗೆ ಆಲಾಪ ಮಾತ್ರ ಶಾಶ್ವತವಾಗಿ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

4 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

6 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

18 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

18 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago