Advertisement
ನಿಧನ‌ ಸುದ್ದಿಗಳು

ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |

Share

‘ಮುಂದಿನ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ.., ಬಾಗಿಲುಗಳು ಎಡಕ್ಕೆ ತೆರೆಯುತ್ತವೆ’ ಮೆಟ್ರೊದಲ್ಲಿ(Metro) ಪ್ರಯಾಣಿಸುವವರಿಗೆ ಚಿರಪರಿಚಿತ ಧ್ವನಿಯಿದು(Voice). ಗುರುವಾರ ರಾತ್ರಿ ಈ ಧ್ವನಿ ಮೆಟ್ರೋದಲ್ಲಿ ಮೊಳಗುತ್ತಲೇ ಇತ್ತು. ಆದರೆ ಆ ಶಾರೀರದ ಹಿಂದಿನ ಶರೀರವನ್ನು ಮಾತ್ರ ಅಪರ್ಣಾ(Aparna) ತೊರೆದಿದ್ದರು. ಕಲಾವಿದೆಯಾಗಿ(Actress), ನಿರೂಪಕಿಯಾಗಿ(Anchor) ಮನೆಮಾತಾಗಿದ್ದ ಅಪರ್ಣಾ ಇನ್ನು ನೆನಪು ಮಾತ್ರ.

ದೀರ್ಘಕಾಲದ ಶ್ವಾಸಕೋಶದ ಕ್ಯಾನ್ಸರ್‌ನಿಂದ(Cancer) ಬಳಲುತ್ತಿದ್ದ ಅಪರ್ಣಾ ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್‌ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು.

ಅಚ್ಚ ಕನ್ನಡದ ನಿರೂಪಕಿ ಎಂದೇ ಹೆಸರಾಗಿದ್ದ ಅಪರ್ಣಾ ವಸ್ತಾರೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ನಿರೂಪಕಿ ಕಾಣಿಸಿಕೊಂಡಿದ್ದರು. ನಿರೂಪಕಿಯಾಗಿ ಸರಿಸುಮಾರು ಮೂರು ದಶಕಗಳನ್ನು ಪೂರೈಸಿರುವ ಅಪರ್ಣಾ ನಟಿಯಾಗಿಯೂ ಕನ್ನಡಿಗರಿಗೆ ಚಿರಪರಿಚಿತರು. ಮುಕ್ತ–ಮುಕ್ತ, ಮೂಡಲಮನೆ ಸೇರಿ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಇವರು, ಮಸಣದ ಹೂವು ಚಿತ್ರದ ಮೂಲಕ ಬೆಳ್ಳಿ ತರೆಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಪರ್ಣಾ ಬಣ್ಣ ಹಚ್ಚಿದ್ದರು. ಗಂಭೀರ ನಿರೂಪಕಿಯಾಗಿದ್ದ ಅಪರ್ಣಾ ಅವರ ಹೊಸ ಮುಖ ತೆರೆದುಕೊಂಡಿದ್ದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಜಾ ಟಾಕೀಸ್‌ ಮೂಲಕ. ವರಲಕ್ಷ್ಮಿ ಪಾತ್ರದಲ್ಲಿ ಹಾಸ್ಯ ಭರಿತವಾಗಿ ನಟಿಸಿ ಕನ್ನಡದ ಮನಸ್ಸುಗಳಿಗೆ ಕಚಗುಳಿ ಇಟ್ಟಿದ್ದರು.

ಇನ್ನು ಬೆಂಗಳೂರಿಗರಿಗೆ ಅದರಲ್ಲೂ ಮೆಟ್ರೊ ಪ್ರಯಾಣಿಕರಿಗೆ ಅಪರ್ಣಾ ಧ್ವನಿ ದಿನನಿತ್ಯದ ಆಲಾಪ. 2011ರಲ್ಲಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಆರಂಭವಾಯಿತು. ಅಂದಿನಿಂದ ಇಂದಿನವರೆಗೂ ಮೆಟ್ರೊ ರೈಲಿನ ಪ್ರಕಟಣೆಗಳಲ್ಲಿ ಕೇಳಿಸುವುದು ಅಪರ್ಣಾ ಧ್ವನಿ. ಮೆಟ್ರೊ ಹತ್ತುವ, ಇಳಿಯುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡುವ ಘೋಷಣೆಗಳು ಕೇಳಿಬರುತ್ತಿದ್ದುದು ಅಪರ್ಣಾ ಅವರದ್ದೇ. ಆದರೆ ಇಂದು ಆ ಮಧುರ ಧ್ವನಿ ಹೊತ್ತ ಶರೀರ ಇಹಲೋಕ ತ್ಯಜಿಸಿದೆ. ಕೇಳುಗರಿಗೆ ಆಲಾಪ ಮಾತ್ರ ಶಾಶ್ವತವಾಗಿ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago