Advertisement
ಮಾಹಿತಿ

ನಾಸಾ ಗಗನಯಾತ್ರಿಯಿಂದ ಬಾಹ್ಯಾಕಾಶದಲ್ಲಿ ಸಾಧನೆ | ಬಾಹ್ಯಾಕಾಶದಲ್ಲಿ ಮೊದಲ ಹೂವು ಅರಳಿಸಿದ ಸ್ಕಾಟ್ ಕೆಲ್ಲಿ

Share

ಗಗನಯಾತ್ರಿಗಳಿಗೆ ಇದೊಂದು ಸಂತಸದ ಸುದ್ದಿ. ಗಗನಯಾತ್ರಿ ಸ್ಕಾಟ್ ಕೆಲ್ಲಿ ಅವರು ಬಾಹ್ಯಾಕಾಶದಲ್ಲಿ ಮೊಟ್ಟಮೊದಲ ಬಾರಿಗೆ ಹೂವನ್ನು ಬೆಳೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಡೀ ಜಗತ್ತಿಗೆ ಇದೊಂದು ಸಿಹಿ ಸುದ್ದಿ. ಇದೇ ಮೊದಲ ಬಾರಿಗೆ ಶೂನ್ಯ ಗುರುತ್ವಾಕರ್ಷಣೆ ಇರುವ ಬಾಹ್ಯಾಕಾಶದಲ್ಲಿ ಹೂವೊಂದು ಅರಳಿದೆ.

ಅಮೆರಿಕದ ಗಗನಯಾತ್ರಿ ಸ್ಕಾಟ್ ಕೆಲ್ಲೆ ಅವರು ಈ ಐತಿಹಾಸಿಕ ಯಶಸ್ಸನ್ನು ಟ್ವಿಟರ್ ಮೂಲಕ ಘೋಷಿಸಿದ್ದಾರೆ ಮತ್ತು ಆರೇಂಜ್ ಬಣ್ಣದ 13 ಎಸಳುಗಳನ್ನೊಳಗೊಂಡ ಆ ಸುಂದರ ಹೂವಿನ ಅದ್ಭುತ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ರೊಮೈನ್ ಲೆಟ್ಟುಸ್ ಮತ್ತು ಅರುಗುಲದಂತಹ ಹಲವಾರು ಗಿಡಗಳನ್ನು ನೆಟ್ಟಿದ್ದರೂ, ಝಿನ್ನಿಯಾಸ್ ಹೂ ಬಿಟ್ಟ ಮೊದಲ ಗಿಡವಾಗಿದೆ. ಇದರಿಂದಾಗಿ ಬಾಹ್ಯಾಕಾಶದಲ್ಲಿ ಗಿಡ ಮರಗಳನ್ನು ನೆಡುವ ವಿಜ್ಞಾನಿಗಳ ಕನಸು ಚಿಗುರಿದೆ.

ಶೂನ್ಯ ಗುರುತ್ವಾಕರ್ಷಣೆಯಲ್ಲೂ ಗಿಡಗಳು ಯಾವ ರೀತಿ ಬೆಳೆಯುತ್ತವೆ ಎಂಬುದನ್ನು ತಿಳಿದುಕೊಳ್ಳಲು ಪ್ರಯೋಗಾರ್ಥವಾಗಿ ಈ ಗಿಡವನ್ನು ಬೆಳೆಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

4 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

7 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

8 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

11 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

11 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

14 hours ago