Advertisement
MIRROR FOCUS

27 ವರ್ಷಗಳ ನಾಸಾ ಸೇವೆ ಪೂರ್ಣ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತಿ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಮಾರು 27 ವರ್ಷಗಳ ಗಮನಾರ್ಹ ಸೇವೆ ಸಲ್ಲಿಸಿರುವ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸಂಸ್ಥೆಯಿಂದ ನಿವೃತ್ತರಾಗಿದ್ದಾರೆ. ಕಳೆದ ತಿಂಗಳು 27ರಂದು ಜಾರಿಗೆ ಬರುವಂತೆ ಸುನೀತಾ ವಿಲಿಯಮ್ಸ್ ಅವರು ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ನಾಸಾ, ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರು ಮಹತ್ವದ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹಾರಾಟ ನಡೆಸಿದ್ದಾರೆ ಎಂದು ತಿಳಿಸಿದೆ. ಒಟ್ಟು 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿರುವ ಅವರು, ನಾಸಾ ಗಗನಯಾತ್ರಿಗಳ ಪೈಕಿ ಎರಡನೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿದ್ದ ಸಾಧನೆಗೆ ಪಾತ್ರರಾಗಿದ್ದಾರೆ.

ಇದಲ್ಲದೇ, ಸುನೀತಾ ವಿಲಿಯಮ್ಸ್ ಅವರು 9 ಬಾರಿ ಬಾಹ್ಯಾಕಾಶ ನಡಿಗೆಗಳನ್ನು (Spacewalks) ಪೂರ್ಣಗೊಳಿಸಿದ್ದು, ಒಟ್ಟು 62 ಗಂಟೆಗಳಿಗಿಂತ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದು ಒಬ್ಬ ಮಹಿಳಾ ಗಗನಯಾತ್ರಿ ಸಾಧಿಸಿರುವ ಅತಿ ಹೆಚ್ಚಿನ ಬಾಹ್ಯಾಕಾಶ ನಡಿಗೆ ಸಮಯವೆಂದು ನಾಸಾ ತಿಳಿಸಿದೆ.

ವಿಶೇಷವೆಂದರೆ, ಬಾಹ್ಯಾಕಾಶದಲ್ಲೇ ಮ್ಯಾರಥಾನ್ ಓಡಿದ ಮೊದಲ ವ್ಯಕ್ತಿ ಎಂಬ ಗೌರವವೂ ಸುನೀತಾ ವಿಲಿಯಮ್ಸ್ ಅವರಿಗೆ ಸಲ್ಲುತ್ತದೆ. ಅವರ ಈ ಸಾಧನೆಗಳು ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲುಗಳಾಗಿ ಗುರುತಿಸಿಕೊಂಡಿವೆ.

ಭಾರತೀಯ ಮೂಲದ 60 ವರ್ಷದ ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಾದ್ಯಂತ ಗಗನಯಾತ್ರಿಯಾಗಿ ಅನೇಕ ಸವಾಲುಗಳನ್ನು ಎದುರಿಸಿ, ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

7 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

12 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

20 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

21 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago