Advertisement
MIRROR FOCUS

27 ವರ್ಷಗಳ ನಾಸಾ ಸೇವೆ ಪೂರ್ಣ: ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತಿ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುಮಾರು 27 ವರ್ಷಗಳ ಗಮನಾರ್ಹ ಸೇವೆ ಸಲ್ಲಿಸಿರುವ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶ ಸಂಸ್ಥೆಯಿಂದ ನಿವೃತ್ತರಾಗಿದ್ದಾರೆ. ಕಳೆದ ತಿಂಗಳು 27ರಂದು ಜಾರಿಗೆ ಬರುವಂತೆ ಸುನೀತಾ ವಿಲಿಯಮ್ಸ್ ಅವರು ನಿವೃತ್ತರಾಗಿದ್ದಾರೆ ಎಂದು ನಾಸಾ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ನಾಸಾ, ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರು ಮಹತ್ವದ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹಾರಾಟ ನಡೆಸಿದ್ದಾರೆ ಎಂದು ತಿಳಿಸಿದೆ. ಒಟ್ಟು 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿರುವ ಅವರು, ನಾಸಾ ಗಗನಯಾತ್ರಿಗಳ ಪೈಕಿ ಎರಡನೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿದ್ದ ಸಾಧನೆಗೆ ಪಾತ್ರರಾಗಿದ್ದಾರೆ.

ಇದಲ್ಲದೇ, ಸುನೀತಾ ವಿಲಿಯಮ್ಸ್ ಅವರು 9 ಬಾರಿ ಬಾಹ್ಯಾಕಾಶ ನಡಿಗೆಗಳನ್ನು (Spacewalks) ಪೂರ್ಣಗೊಳಿಸಿದ್ದು, ಒಟ್ಟು 62 ಗಂಟೆಗಳಿಗಿಂತ ಹೆಚ್ಚು ಕಾಲ ಬಾಹ್ಯಾಕಾಶದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದು ಒಬ್ಬ ಮಹಿಳಾ ಗಗನಯಾತ್ರಿ ಸಾಧಿಸಿರುವ ಅತಿ ಹೆಚ್ಚಿನ ಬಾಹ್ಯಾಕಾಶ ನಡಿಗೆ ಸಮಯವೆಂದು ನಾಸಾ ತಿಳಿಸಿದೆ.

ವಿಶೇಷವೆಂದರೆ, ಬಾಹ್ಯಾಕಾಶದಲ್ಲೇ ಮ್ಯಾರಥಾನ್ ಓಡಿದ ಮೊದಲ ವ್ಯಕ್ತಿ ಎಂಬ ಗೌರವವೂ ಸುನೀತಾ ವಿಲಿಯಮ್ಸ್ ಅವರಿಗೆ ಸಲ್ಲುತ್ತದೆ. ಅವರ ಈ ಸಾಧನೆಗಳು ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲುಗಳಾಗಿ ಗುರುತಿಸಿಕೊಂಡಿವೆ.

ಭಾರತೀಯ ಮೂಲದ 60 ವರ್ಷದ ಸುನೀತಾ ವಿಲಿಯಮ್ಸ್ ಅವರು ತಮ್ಮ ವೃತ್ತಿ ಜೀವನದಾದ್ಯಂತ ಗಗನಯಾತ್ರಿಯಾಗಿ ಅನೇಕ ಸವಾಲುಗಳನ್ನು ಎದುರಿಸಿ, ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

14 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

21 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

23 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

23 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago