ಪುತ್ತೂರು | ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಬೆಳ್ಳಿಯ ಪದಕ

November 2, 2022
10:07 AM

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.

ಛತ್ತೀಸ್‍ಗಢದ ಬಿಲಾಸ್‍ಪುರ್ ನಲ್ಲಿ ನಡೆದ 23ರ ಹರೆಯದೊಳಗಿನ 2ನೇ ರಾಷ್ಟ್ರೀಯ ಅತ್ಲೆಟಿಕ್ ಕ್ರೀಡಾಕೂಟದಲ್ಲಿ ಟ್ರಿಪಲ್‍ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 12.79 ಮೀಟರ್ ದೂರ ಜಿಗಿಯುವ ಮೂಲಕ ತನ್ನ ವೈಯಕ್ತಿಕ ದಾಖಲೆಯನ್ನೂ ಉತ್ತಮ ಪಡಿಸಿಕೊಂಡಿದ್ದಾರೆ. ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಇವರಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror