Advertisement
ಸುದ್ದಿಗಳು

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ

Share

ಐಸಿಎಆರ್–ಕೆವಿಕೆ ದಕ್ಷಿಣ ಕನ್ನಡ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ಫುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ಇಲಾಖೆ, ಸಮನ್ವಯ ಟ್ರಸ್ಟ್ ಹಾಗೂ ಐಎಟಿ ಸಹಯೋಗದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮ್ ಪ್ರಸಾದ್ (ಎಫ್‌ಕೆಸಿಸಿಐ ಉಪಾಧ್ಯಕ್ಷರು), ರೂಪಲತಾ, ಸಿ.ಎನ್. ಶಿವಪ್ರಕಾಶ್ (KAPPEC), ಎನ್.ಎಚ್. ಶಿವಶಂಕರ ರೆಡ್ಡಿ, ರೂಪ ರಾಣಿ (ಅಗ್ರಿಟೆಕ್ ಕಮಿಟಿ ಚೇರ್‌ಪರ್ಸನ್ – ಎಫ್‌ಕೆಸಿಸಿಐ), ಡಾ. ಎ.ಬಿ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯ್ಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಿತ್ತಲಮನಿ ಮತ್ತು ಡಾ. ವಿ.ಸಿ. ರಂಗಸ್ವಾಮಿ ಅವರನ್ನು ಕೃಷಿ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಯತೀಶ್ ತುಕಾರಾಂ (ಫೌಂಡರ್ & ಸಿಇಒ – ಫುಡ್ ಚೈನ್ ಕ್ಯಾಂಪೇನ್), ಪ್ರಸಾದ್ ಶೆಟ್ಟಿ (ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ವಿಟ್ಲ), ರಮೇಶ್ (ಮುಖ್ಯಸ್ಥರು ಹಾಗೂ ಪ್ರಧಾನ ವಿಜ್ಞಾನಿಗಳು – ಕೆವಿಕೆ ದಕ್ಷಿಣ ಕನ್ನಡ) ಮತ್ತು ಯೋಗೇಶ್ (ಐಎಟಿ) ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅದೇ ರೀತಿ ಎನ್‌ಆರ್‌ಎಲ್‌ಎಂ ಸಂಜೀವಿನಿ ಕೃಷಿ ಸಖಿಯರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹಿನಿ ವಿಶ್ವನಾಥ್ (ನಿಶಾ) ಸಹಿತ 34 ಕೃಷಿ ಸಖಿಯರನ್ನು ‘ಫಾರ್ಮರ್ಸ್ ರಿಲೇಶನ್ಸ್ ಅವಾರ್ಡ್’ಗೆ ಆಯ್ಕೆ ಮಾಡಲಾಗಿದ್ದು,  33 ಸಖಿಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕೃಷಿಕರಿಗೆ ಹಾಗೂ ಮಹಿಳೆಯರಿಗೆ ಮಾಹಿತಿ ಒದಗಿಸುವುದು, ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತಿರುವ ಕೃಷಿ ಸಖಿಯರ ಸೇವೆಯನ್ನು ಗುರುತಿಸಿ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

10 minutes ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

4 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

4 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

5 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

5 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

5 hours ago