Advertisement
ಸುದ್ದಿಗಳು

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ

Share

ಐಸಿಎಆರ್–ಕೆವಿಕೆ ದಕ್ಷಿಣ ಕನ್ನಡ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ಫುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ಇಲಾಖೆ, ಸಮನ್ವಯ ಟ್ರಸ್ಟ್ ಹಾಗೂ ಐಎಟಿ ಸಹಯೋಗದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮ್ ಪ್ರಸಾದ್ (ಎಫ್‌ಕೆಸಿಸಿಐ ಉಪಾಧ್ಯಕ್ಷರು), ರೂಪಲತಾ, ಸಿ.ಎನ್. ಶಿವಪ್ರಕಾಶ್ (KAPPEC), ಎನ್.ಎಚ್. ಶಿವಶಂಕರ ರೆಡ್ಡಿ, ರೂಪ ರಾಣಿ (ಅಗ್ರಿಟೆಕ್ ಕಮಿಟಿ ಚೇರ್‌ಪರ್ಸನ್ – ಎಫ್‌ಕೆಸಿಸಿಐ), ಡಾ. ಎ.ಬಿ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯ್ಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಿತ್ತಲಮನಿ ಮತ್ತು ಡಾ. ವಿ.ಸಿ. ರಂಗಸ್ವಾಮಿ ಅವರನ್ನು ಕೃಷಿ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಯತೀಶ್ ತುಕಾರಾಂ (ಫೌಂಡರ್ & ಸಿಇಒ – ಫುಡ್ ಚೈನ್ ಕ್ಯಾಂಪೇನ್), ಪ್ರಸಾದ್ ಶೆಟ್ಟಿ (ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ವಿಟ್ಲ), ರಮೇಶ್ (ಮುಖ್ಯಸ್ಥರು ಹಾಗೂ ಪ್ರಧಾನ ವಿಜ್ಞಾನಿಗಳು – ಕೆವಿಕೆ ದಕ್ಷಿಣ ಕನ್ನಡ) ಮತ್ತು ಯೋಗೇಶ್ (ಐಎಟಿ) ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅದೇ ರೀತಿ ಎನ್‌ಆರ್‌ಎಲ್‌ಎಂ ಸಂಜೀವಿನಿ ಕೃಷಿ ಸಖಿಯರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹಿನಿ ವಿಶ್ವನಾಥ್ (ನಿಶಾ) ಸಹಿತ 34 ಕೃಷಿ ಸಖಿಯರನ್ನು ‘ಫಾರ್ಮರ್ಸ್ ರಿಲೇಶನ್ಸ್ ಅವಾರ್ಡ್’ಗೆ ಆಯ್ಕೆ ಮಾಡಲಾಗಿದ್ದು,  33 ಸಖಿಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕೃಷಿಕರಿಗೆ ಹಾಗೂ ಮಹಿಳೆಯರಿಗೆ ಮಾಹಿತಿ ಒದಗಿಸುವುದು, ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತಿರುವ ಕೃಷಿ ಸಖಿಯರ ಸೇವೆಯನ್ನು ಗುರುತಿಸಿ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

8 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

12 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

16 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago