ಐಸಿಎಆರ್–ಕೆವಿಕೆ ದಕ್ಷಿಣ ಕನ್ನಡ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ಫುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ಇಲಾಖೆ, ಸಮನ್ವಯ ಟ್ರಸ್ಟ್ ಹಾಗೂ ಐಎಟಿ ಸಹಯೋಗದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ್ ಪ್ರಸಾದ್ (ಎಫ್ಕೆಸಿಸಿಐ ಉಪಾಧ್ಯಕ್ಷರು), ರೂಪಲತಾ, ಸಿ.ಎನ್. ಶಿವಪ್ರಕಾಶ್ (KAPPEC), ಎನ್.ಎಚ್. ಶಿವಶಂಕರ ರೆಡ್ಡಿ, ರೂಪ ರಾಣಿ (ಅಗ್ರಿಟೆಕ್ ಕಮಿಟಿ ಚೇರ್ಪರ್ಸನ್ – ಎಫ್ಕೆಸಿಸಿಐ), ಡಾ. ಎ.ಬಿ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯ್ಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಿತ್ತಲಮನಿ ಮತ್ತು ಡಾ. ವಿ.ಸಿ. ರಂಗಸ್ವಾಮಿ ಅವರನ್ನು ಕೃಷಿ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಯತೀಶ್ ತುಕಾರಾಂ (ಫೌಂಡರ್ & ಸಿಇಒ – ಫುಡ್ ಚೈನ್ ಕ್ಯಾಂಪೇನ್), ಪ್ರಸಾದ್ ಶೆಟ್ಟಿ (ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ವಿಟ್ಲ), ರಮೇಶ್ (ಮುಖ್ಯಸ್ಥರು ಹಾಗೂ ಪ್ರಧಾನ ವಿಜ್ಞಾನಿಗಳು – ಕೆವಿಕೆ ದಕ್ಷಿಣ ಕನ್ನಡ) ಮತ್ತು ಯೋಗೇಶ್ (ಐಎಟಿ) ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅದೇ ರೀತಿ ಎನ್ಆರ್ಎಲ್ಎಂ ಸಂಜೀವಿನಿ ಕೃಷಿ ಸಖಿಯರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹಿನಿ ವಿಶ್ವನಾಥ್ (ನಿಶಾ) ಸಹಿತ 34 ಕೃಷಿ ಸಖಿಯರನ್ನು ‘ಫಾರ್ಮರ್ಸ್ ರಿಲೇಶನ್ಸ್ ಅವಾರ್ಡ್’ಗೆ ಆಯ್ಕೆ ಮಾಡಲಾಗಿದ್ದು, 33 ಸಖಿಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕೃಷಿಕರಿಗೆ ಹಾಗೂ ಮಹಿಳೆಯರಿಗೆ ಮಾಹಿತಿ ಒದಗಿಸುವುದು, ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತಿರುವ ಕೃಷಿ ಸಖಿಯರ ಸೇವೆಯನ್ನು ಗುರುತಿಸಿ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…