Advertisement
ಸುದ್ದಿಗಳು

ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ

Share

ಐಸಿಎಆರ್–ಕೆವಿಕೆ ದಕ್ಷಿಣ ಕನ್ನಡ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ಫುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ಇಲಾಖೆ, ಸಮನ್ವಯ ಟ್ರಸ್ಟ್ ಹಾಗೂ ಐಎಟಿ ಸಹಯೋಗದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮ್ ಪ್ರಸಾದ್ (ಎಫ್‌ಕೆಸಿಸಿಐ ಉಪಾಧ್ಯಕ್ಷರು), ರೂಪಲತಾ, ಸಿ.ಎನ್. ಶಿವಪ್ರಕಾಶ್ (KAPPEC), ಎನ್.ಎಚ್. ಶಿವಶಂಕರ ರೆಡ್ಡಿ, ರೂಪ ರಾಣಿ (ಅಗ್ರಿಟೆಕ್ ಕಮಿಟಿ ಚೇರ್‌ಪರ್ಸನ್ – ಎಫ್‌ಕೆಸಿಸಿಐ), ಡಾ. ಎ.ಬಿ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯ್ಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಿತ್ತಲಮನಿ ಮತ್ತು ಡಾ. ವಿ.ಸಿ. ರಂಗಸ್ವಾಮಿ ಅವರನ್ನು ಕೃಷಿ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಯತೀಶ್ ತುಕಾರಾಂ (ಫೌಂಡರ್ & ಸಿಇಒ – ಫುಡ್ ಚೈನ್ ಕ್ಯಾಂಪೇನ್), ಪ್ರಸಾದ್ ಶೆಟ್ಟಿ (ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ವಿಟ್ಲ), ರಮೇಶ್ (ಮುಖ್ಯಸ್ಥರು ಹಾಗೂ ಪ್ರಧಾನ ವಿಜ್ಞಾನಿಗಳು – ಕೆವಿಕೆ ದಕ್ಷಿಣ ಕನ್ನಡ) ಮತ್ತು ಯೋಗೇಶ್ (ಐಎಟಿ) ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅದೇ ರೀತಿ ಎನ್‌ಆರ್‌ಎಲ್‌ಎಂ ಸಂಜೀವಿನಿ ಕೃಷಿ ಸಖಿಯರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹಿನಿ ವಿಶ್ವನಾಥ್ (ನಿಶಾ) ಸಹಿತ 34 ಕೃಷಿ ಸಖಿಯರನ್ನು ‘ಫಾರ್ಮರ್ಸ್ ರಿಲೇಶನ್ಸ್ ಅವಾರ್ಡ್’ಗೆ ಆಯ್ಕೆ ಮಾಡಲಾಗಿದ್ದು,  33 ಸಖಿಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕೃಷಿಕರಿಗೆ ಹಾಗೂ ಮಹಿಳೆಯರಿಗೆ ಮಾಹಿತಿ ಒದಗಿಸುವುದು, ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತಿರುವ ಕೃಷಿ ಸಖಿಯರ ಸೇವೆಯನ್ನು ಗುರುತಿಸಿ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

6 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

7 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago