ಐಸಿಎಆರ್–ಕೆವಿಕೆ ದಕ್ಷಿಣ ಕನ್ನಡ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ಫುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ಇಲಾಖೆ, ಸಮನ್ವಯ ಟ್ರಸ್ಟ್ ಹಾಗೂ ಐಎಟಿ ಸಹಯೋಗದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ್ ಪ್ರಸಾದ್ (ಎಫ್ಕೆಸಿಸಿಐ ಉಪಾಧ್ಯಕ್ಷರು), ರೂಪಲತಾ, ಸಿ.ಎನ್. ಶಿವಪ್ರಕಾಶ್ (KAPPEC), ಎನ್.ಎಚ್. ಶಿವಶಂಕರ ರೆಡ್ಡಿ, ರೂಪ ರಾಣಿ (ಅಗ್ರಿಟೆಕ್ ಕಮಿಟಿ ಚೇರ್ಪರ್ಸನ್ – ಎಫ್ಕೆಸಿಸಿಐ), ಡಾ. ಎ.ಬಿ. ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯ್ಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಹಿತ್ತಲಮನಿ ಮತ್ತು ಡಾ. ವಿ.ಸಿ. ರಂಗಸ್ವಾಮಿ ಅವರನ್ನು ಕೃಷಿ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಯತೀಶ್ ತುಕಾರಾಂ (ಫೌಂಡರ್ & ಸಿಇಒ – ಫುಡ್ ಚೈನ್ ಕ್ಯಾಂಪೇನ್), ಪ್ರಸಾದ್ ಶೆಟ್ಟಿ (ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ, ವಿಟ್ಲ), ರಮೇಶ್ (ಮುಖ್ಯಸ್ಥರು ಹಾಗೂ ಪ್ರಧಾನ ವಿಜ್ಞಾನಿಗಳು – ಕೆವಿಕೆ ದಕ್ಷಿಣ ಕನ್ನಡ) ಮತ್ತು ಯೋಗೇಶ್ (ಐಎಟಿ) ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅದೇ ರೀತಿ ಎನ್ಆರ್ಎಲ್ಎಂ ಸಂಜೀವಿನಿ ಕೃಷಿ ಸಖಿಯರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮೋಹಿನಿ ವಿಶ್ವನಾಥ್ (ನಿಶಾ) ಸಹಿತ 34 ಕೃಷಿ ಸಖಿಯರನ್ನು ‘ಫಾರ್ಮರ್ಸ್ ರಿಲೇಶನ್ಸ್ ಅವಾರ್ಡ್’ಗೆ ಆಯ್ಕೆ ಮಾಡಲಾಗಿದ್ದು, 33 ಸಖಿಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕೃಷಿಕರಿಗೆ ಹಾಗೂ ಮಹಿಳೆಯರಿಗೆ ಮಾಹಿತಿ ಒದಗಿಸುವುದು, ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಶ್ರಮಿಸುತ್ತಿರುವ ಕೃಷಿ ಸಖಿಯರ ಸೇವೆಯನ್ನು ಗುರುತಿಸಿ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…