ರಾಷ್ಟ್ರೀಯ ಗೋಕುಲ ಮಿಷನ್ | ಹಸು ಸಾಕುವ ರೈತನಿಗೆ ಕೇಂದ್ರದಿಂದ ಹೊಸ ಸ್ಕೀಮ್

December 30, 2025
6:43 AM

ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

Advertisement
Advertisement

ಈ ಯೋಜನೆಯ ಪ್ರಮುಖ ಉದ್ದೇಶ :

  • ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  • ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  • ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  • ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.

ಪ್ರಯೋಜನಗಳು ಹೀಗಿವೆ:

ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ.  ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror