Advertisement
ಸುದ್ದಿಗಳು

ರಾಷ್ಟ್ರೀಯ ಗೋಕುಲ ಮಿಷನ್ | ಹಸು ಸಾಕುವ ರೈತನಿಗೆ ಕೇಂದ್ರದಿಂದ ಹೊಸ ಸ್ಕೀಮ್

Share

ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

Advertisement
Advertisement

ಈ ಯೋಜನೆಯ ಪ್ರಮುಖ ಉದ್ದೇಶ :

  • ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  • ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  • ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  • ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.

ಪ್ರಯೋಜನಗಳು ಹೀಗಿವೆ:

ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ.  ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

3 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

11 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

17 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

18 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

18 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

18 hours ago