Advertisement
ಸುದ್ದಿಗಳು

ರಾಷ್ಟ್ರೀಯ ಗೋಕುಲ ಮಿಷನ್ | ಹಸು ಸಾಕುವ ರೈತನಿಗೆ ಕೇಂದ್ರದಿಂದ ಹೊಸ ಸ್ಕೀಮ್

Share

ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಈ ಯೋಜನೆಯ ಪ್ರಮುಖ ಉದ್ದೇಶ :

  • ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  • ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  • ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  • ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.

ಪ್ರಯೋಜನಗಳು ಹೀಗಿವೆ:

ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ.  ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

9 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

9 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

14 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

14 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

14 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago