Advertisement
ಸುದ್ದಿಗಳು

ರಾಷ್ಟ್ರೀಯ ಗೋಕುಲ ಮಿಷನ್ | ಹಸು ಸಾಕುವ ರೈತನಿಗೆ ಕೇಂದ್ರದಿಂದ ಹೊಸ ಸ್ಕೀಮ್

Share

ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಈ ಯೋಜನೆಯ ಪ್ರಮುಖ ಉದ್ದೇಶ :

  • ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  • ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  • ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  • ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.

ಪ್ರಯೋಜನಗಳು ಹೀಗಿವೆ:

ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ.  ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

33 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

4 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

5 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

17 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago