Advertisement
ಸುದ್ದಿಗಳು

ರಾಷ್ಟ್ರೀಯ ಗೋಕುಲ ಮಿಷನ್ | ಹಸು ಸಾಕುವ ರೈತನಿಗೆ ಕೇಂದ್ರದಿಂದ ಹೊಸ ಸ್ಕೀಮ್

Share

ದೇಶಿಯ ತಳಿಗಳನ್ನು ಉಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಗೋಕುಲ ಮಿಷನ್ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಹಸು ಎಮ್ಮೆಸಾಕುವ ರೈತರು ವಾರ್ಷಿಕ ಆದಾಯದಲ್ಲಿ ಸರಾಸರಿ ರೂ.21,500 ರೂ ಹೆಚ್ಚಳ ಮಾಡುವ ಗುರಿ ಸರ್ಕಾರ ಹೊಂದಿದೆ. ಈ ಯೋಜನೆಯು 2021-2026 ರ ಅವಧಿಗೆ ‘ರಾಷ್ಟ್ರೀಯ ಪಶುಧನ ವಿಕಾಸ ಯೋಜನೆ’ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಈ ಯೋಜನೆಯ ಪ್ರಮುಖ ಉದ್ದೇಶ :

  • ಉತ್ಪಾದಕತೆ ಹೆಚ್ಚಳ: ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ ಹೈನುರಾಸುಗಳ ಹಾಲು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ತಳಿ ಸುಧಾರಣೆ: ತಳೀಯವಾಗಿ ಉತ್ತಮ ಗುಣಮಟ್ಟದ ಹೋರಿಗಳನ್ನು ಸಂತಾನೋತ್ಪತ್ತಿಗೆ ಬಳಸುವುದು.
  • ಕೃತಕ ಗರ್ಭಧಾರಣೆ ವಿಸ್ತರಣೆ: ರೈತರ ಮನೆ ಬಾಗಿಲಿಗೇ ಗುಣಮಟ್ಟದ ಕೃತಕ ಗರ್ಭಧಾರಣೆ ಸೇವೆಗಳನ್ನು ತಲುಪಿಸುವುದು.
  • ತಳಿ ಸಂರಕ್ಷಣೆ: ದೇಶೀಯ ಗೋತಳಿಗಳು ಮತ್ತು ಎಮ್ಮೆ ತಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವುದು.
  • ರೈತರ ಸಬಲೀಕರಣ: ಸಣ್ಣ ರೈತರು ಮತ್ತು ಮಹಿಳಾ ಪಶುಪಾಲಕರಿಗೆ ಹೈನುಗಾರಿಕೆಯನ್ನು ಹೆಚ್ಚು ಲಾಭದಾಯಕವಾಗಿಸುವುದು.

ಪ್ರಯೋಜನಗಳು ಹೀಗಿವೆ:

ಉಚಿತ ಸೇವೆ: ನಿಮ್ಮ ಹಸು ಅಥವಾ ಎಮ್ಮೆಗೆ ಕೃತಕ ಗರ್ಭದಾರಣೆ ಮಾಡಿಸಲು ಆಸ್ಪತ್ರೆಗೆ ಹೋಗಬೇಕಿಲ್ಲ. ಬದಲಾಗಿ ವೈದ್ಯರೇ ಮನೆಗೆ ಬರುತ್ತಾರೆ.
ಐವಿಎಫ್ ಸಬ್ಸಿಡಿ: ನಿಮ್ಮ ಹಸು ಗರ್ಭ ಧರಿಸುವುದು ಖಚಿತವಾದರೆ, ಸರ್ಕಾರದಿಂದ ರೈತನಿಗೆ ರೂ.5000 ಪ್ರೋತ್ಸಾಹ ಧನ ಸಿಗುತ್ತದೆ.
ದೊಡ್ಡ ಉದ್ಯಮಕ್ಕೆ ಸಾಲ: ಹಸು ಎಮ್ಮೆಗಳ ದೊಡ್ಡ ಉದ್ಯಮವಾಗಿದ್ದರೆ ರೂ2 ಕೋಟಿ ವರೆಗೆ ಸಬ್ಸಿಡಿ ಸಿಗುತ್ತದೆ.  ಬ್ಯಾಂಕ್ ಸಾಲದ ಬಡ್ಡಿ 3%
ಅರ್ಜಿ ಸಲ್ಲಿಸುವ ವಿಧಾನ : ರಾಷ್ಟ್ರೀಯ ಪಶುಧನ ಮಿಷನ್‌ನ ಅಧಿಕೃತ ಪೋರ್ಟಲ್ nlm.udyamimitra.in ಅಥವಾ ನಿಮ್ಮ ರಾಜ್ಯದ ಪಶುಸಂಗೋಪನಾ ಇಲಾಖೆಯ ವೆಬ್‌ಸೈಟ್‌ https://ahvs.karnataka.gov.in/ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಿ ಮತ್ತು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

19 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago