Advertisement
MIRROR FOCUS

ರಾಷ್ಟ್ರೀಯ ಕೈಮಗ್ಗ ದಿನ | ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲ

Share

ಪ್ರತಿ ವರ್ಷ ಭಾರತದಲ್ಲಿ(India) ಆಗಸ್ಟ್‌ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನ ಆಚರಣೆ ಮಾಡಲಾಗುತ್ತದೆ. 1905ರ ಸ್ವದೇಶಿ ಚಳವಳಿಯ ಸವಿನೆನಪಿಗಾಗಿ 2015 ರಲ್ಲಿ ಮೊದಲ ಬಾರಿಗೆ ಆಗಸ್ಟ್ 7 ರಂದು ‘ರಾಷ್ಟ್ರೀಯ ಕೈಮಗ್ಗ ದಿನ’ವನ್ನಾಗಿ ಕೇಂದ್ರ ಸರ್ಕಾರ(Central Govt) ಆಚರಿಸಿತು. ಕೈಮಗ್ಗ ಕ್ಷೇತ್ರದಲ್ಲಿ ಹೊಸ ಉತ್ಪನ್ನಗಳನ್ನು ಆವಿಷ್ಕರಿಸಿದವರಿಗೆ 2015 ರಿಂದ ಸಂತ ಕಬೀರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

1905 ಆಗಸ್ಟ್ 7 ರಂದು ಬಂಗಾಳದಲ್ಲಿ ಸ್ವದೇಶಿ ಚಲುವಳಿ ಪ್ರಾರಂಭವಾಗಿತ್ತು. ಆ ಚಳುವಳಿಯ ಮೂಲ ಉದ್ದೇಶ ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಿ, ಭಾರತೀಯ ನಿರ್ಮಿತ ಉತ್ಪನ್ನಗಳನ್ನು ಉತ್ತೇಜಿಸುವುದಾಗಿದೆ. ಹಾಗಾಗಿ ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. 2015 ರಲ್ಲಿ ಪ್ರಧಾನಿ ಮೋದಿ ಅವರು ದೇಶದಲ್ಲಿ ಇರುವ ನೇಕಾರರ ಕೆಲಸ ಮತ್ತು ಅವರ ಶ್ರಮವನ್ನು ಶ್ಲಾಘಿಸುವ ಮೂಲಕ ಮೊದಲ ಬಾರಿಗೆ ರಾಷ್ಟ್ರೀಯ ಕೈಮಗ್ಗ ದಿನವನ್ನು ಉದ್ಘಾಟನೆ ಮಾಡಿದ್ದರು.

ರಾಷ್ಟ್ರೀಯ ಕೈಮಗ್ಗ ದಿನದ ಮಹತ್ವ: ಭಾರತ ದೇಶದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಪ್ರತಿಕವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಕೈಮಗ್ಗವು ದೇಶದ ಮಹಿಳೆಯರಿಗೆ ಪ್ರಮುಖ ಜೀವನೋಪಾಯದ ಮೂಲವಾಗಿದೆ. ಇದು ದೇಶದ ಕೈಮಗ್ಗ ನೇಕಾರರನ್ನು ಗೌರವಿಸುವ ದಿನವೂ ಹೌದು. ದೇಶದ ನೇಕಾರರ ಅಭಿವೃದ್ಧಿಗಾಗಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago