ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ | ರಾಷ್ಟ್ರೀಯ ತೋಟಗಾರಿಕೆ ಮೇಳ -2023 |

February 18, 2023
1:55 PM

  ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆಸ್ವಾವಲಂಬನೆಗಾಗಿ ನವೀನ ತೋಟಗಾರಿಕೆಎಂಬ ವಿಷಯದಡಿ ಫೆ.22 ರಿಂದ 25ರವರೆಗೆರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ಕುಮಾರ್ ಸಿಂಗ್ ತಿಳಿಸಿದರು.

   ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್‌ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ಕುಮಾರ್ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror