ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆ ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ” ಎಂಬ ವಿಷಯದಡಿ ಫೆ.22 ರಿಂದ 25ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ ಕುಮಾರ್ ಸಿಂಗ್ ತಿಳಿಸಿದರು.
ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…