ರೈತರಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕುರಿತು ಸಮಸ್ಯೆಗೆ ಪರಿಹಾರ ಒದಗಿಸುವುದು ಸೇರಿ ವಿವಿಧ ವಿಚಾರಗಳ ಬಗ್ಗೆ ‘ಸ್ವಾವಲಂಬನೆಗಾಗಿ ನವೀನ ತೋಟಗಾರಿಕೆ” ಎಂಬ ವಿಷಯದಡಿ ಫೆ.22 ರಿಂದ 25ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ-2023” ನಡೆಯಲಿದೆ ಎಂದು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ ಕುಮಾರ್ ಸಿಂಗ್ ತಿಳಿಸಿದರು.
ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಮೇಳ ನಡೆಯಲಿದೆ. ತೋಟಗಾರಿಕೆ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ರೈತರು ಆಗಮಿಸಲಿದ್ದಾರೆ. ರೈತರು ಮತ್ತು ತೋಟಗಾರಿಕೆ ಉದ್ಯಮಿಗಳು ತಯಾರಿಸಿದ ಹೊಸ ತಂತ್ರಜ್ಞಾನಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸ್ಥೆ ಹೊಸದಾಗಿ ಸೃಷ್ಠಿಸಿದ ತಳಿಗಳು, ಅಭಿವೃದ್ಧಿ ಪಡಿಸಲಾದ ತೋಟಗಾರಿಕೆ ಬೀಜಗಳನ್ನು ಮೇಳದಲ್ಲಿ ಪ್ರದರ್ಶಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
250 ಮಳಿಗೆಗಳನ್ನು ತೆರೆಯಲಾಗಿದೆ. ಜೈವಿಕ ಗೊಬ್ಬರ. ವಿಶೇಷ ತಳಿಯ ಹಣ್ಣಿನ ಗಿಡಗಳು, ಬಿತ್ತನೆ ಬೀಜಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳ ಮಳಿಗೆಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿದೆ. ಫೆ.25 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ 20 ಉತ್ತಮ ರೈತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಹೇಳಿದರು. ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ನಂದೀಶ್ .ಪಿ. ಸಂಘಟನಾ ಕಾರ್ಯದರ್ಶಿ ಡಾ. ವೆಂಕಟ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…