Advertisement
MIRROR FOCUS

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

Share

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement

ದೇಶದಲ್ಲಿ ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,ಈ ಬಾರಿ ನಮ್ಮ ದೇಶ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ನಾವು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.

ಮಂಗಳೂರು ನಗರ ಚೆಸ್ ಆಟದಲ್ಲಿ ಪಂದ್ಯಾವಳಿಯಲ್ಲಿ ನಮ್ಮ ದೇಶಕ್ಕೇ ಮಾದರಿಯಾಗುತ್ತಾ, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹಾಗೂ ಉತ್ತಮ ಆಟಗಾರರನ್ನು ಪರಿಚಯಿಸುತ್ತಿದೆ. ಮೇ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಿರಂತರ 5 ದಿನ 9 ರೌಂಡಗಳಲ್ಲಿ ಪಂದ್ಯಾಟ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯತೀಶ್ IPS  ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ,KSCA ಅಧ್ಯಕ್ಷ  ಮದುಕರ್, MRPL group General Manager ಕೃಷ್ಣ ಹೆಗ್ಡೆ ಮಿಯಾರ್ ಭಾಗವಹಿಸಲಿರುವರು.ಮೇ 6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಮೇಶ್‌ ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ  ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

8 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

8 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

8 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

9 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

9 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

9 hours ago