MIRROR FOCUS

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement

ದೇಶದಲ್ಲಿ ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,ಈ ಬಾರಿ ನಮ್ಮ ದೇಶ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ನಾವು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.

ಮಂಗಳೂರು ನಗರ ಚೆಸ್ ಆಟದಲ್ಲಿ ಪಂದ್ಯಾವಳಿಯಲ್ಲಿ ನಮ್ಮ ದೇಶಕ್ಕೇ ಮಾದರಿಯಾಗುತ್ತಾ, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹಾಗೂ ಉತ್ತಮ ಆಟಗಾರರನ್ನು ಪರಿಚಯಿಸುತ್ತಿದೆ. ಮೇ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಿರಂತರ 5 ದಿನ 9 ರೌಂಡಗಳಲ್ಲಿ ಪಂದ್ಯಾಟ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯತೀಶ್ IPS  ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ,KSCA ಅಧ್ಯಕ್ಷ  ಮದುಕರ್, MRPL group General Manager ಕೃಷ್ಣ ಹೆಗ್ಡೆ ಮಿಯಾರ್ ಭಾಗವಹಿಸಲಿರುವರು.ಮೇ 6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಮೇಶ್‌ ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ  ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ ಇದ್ದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

5 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

5 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

6 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

10 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

10 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago