ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷ ರಮೇಶ್ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….
ದೇಶದಲ್ಲಿ ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,ಈ ಬಾರಿ ನಮ್ಮ ದೇಶ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ನಾವು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.
ಮಂಗಳೂರು ನಗರ ಚೆಸ್ ಆಟದಲ್ಲಿ ಪಂದ್ಯಾವಳಿಯಲ್ಲಿ ನಮ್ಮ ದೇಶಕ್ಕೇ ಮಾದರಿಯಾಗುತ್ತಾ, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹಾಗೂ ಉತ್ತಮ ಆಟಗಾರರನ್ನು ಪರಿಚಯಿಸುತ್ತಿದೆ. ಮೇ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಿರಂತರ 5 ದಿನ 9 ರೌಂಡಗಳಲ್ಲಿ ಪಂದ್ಯಾಟ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ IPS ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ,KSCA ಅಧ್ಯಕ್ಷ ಮದುಕರ್, MRPL group General Manager ಕೃಷ್ಣ ಹೆಗ್ಡೆ ಮಿಯಾರ್ ಭಾಗವಹಿಸಲಿರುವರು.ಮೇ 6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಮೇಶ್ ಕೋಟೆ ತಿಳಿಸಿದ್ದಾರೆ.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಎಸೋಸಿಯೇಶನ್ ಗೌರವಾಧ್ಯಕ್ಷ ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ ಇದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…