Advertisement
MIRROR FOCUS

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

Share

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

ದೇಶದಲ್ಲಿ ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,ಈ ಬಾರಿ ನಮ್ಮ ದೇಶ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು ಹೆಮ್ಮೆಯ ವಿಷಯವಾಗಿದೆ. ನಮ್ಮ ಜಿಲ್ಲೆಯು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ನಾವು ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.

ಮಂಗಳೂರು ನಗರ ಚೆಸ್ ಆಟದಲ್ಲಿ ಪಂದ್ಯಾವಳಿಯಲ್ಲಿ ನಮ್ಮ ದೇಶಕ್ಕೇ ಮಾದರಿಯಾಗುತ್ತಾ, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹಾಗೂ ಉತ್ತಮ ಆಟಗಾರರನ್ನು ಪರಿಚಯಿಸುತ್ತಿದೆ. ಮೇ 2 ರಿಂದ 6 ರ ತನಕ ಮಂಗಳೂರು ಟೌನ್ ಹಾಲ್ ನಲ್ಲಿ ನಿರಂತರ 5 ದಿನ 9 ರೌಂಡಗಳಲ್ಲಿ ಪಂದ್ಯಾಟ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಯತೀಶ್ IPS  ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ,KSCA ಅಧ್ಯಕ್ಷ  ಮದುಕರ್, MRPL group General Manager ಕೃಷ್ಣ ಹೆಗ್ಡೆ ಮಿಯಾರ್ ಭಾಗವಹಿಸಲಿರುವರು.ಮೇ 6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಮೇಶ್‌ ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೇಮಾರ್ , ಜೊತೆ ಕಾರ್ಯದರ್ಶಿ  ಸತ್ಯಪ್ರಸಾದ್ , ಖಜಾಂಜಿ ರಮ್ಯಾ ಎಸ್ ರೈ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

22 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago