ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿಗೆ ಚಾಲನೆ

December 26, 2025
8:52 PM

ದೇಶದಲ್ಲಿ ಚೆಸ್‌ ಸ್ಫರ್ಧೆಗೆ ಹೆಚ್ಚಿನ ಆದ್ಯತೆಯನ್ನು ಇಂದು ನೀಡಲಾಗುತ್ತಿದೆ. ಮಕ್ಕಳಲ್ಲಿ ಈ ಕೌಶಲ್ಯ ವೃದ್ಧಿಸುವ ಅಗತ್ಯ ಇದೆ. ಚೆಸ್ ಚಿಂತನೆ, ಏಕಾಗ್ರತೆ, ತಾಳ್ಮೆ, ಸಮಸ್ಯೆ-ಪರಿಹಾರ ಮತ್ತು ಯೋಜನಾ ಕೌಶಲ್ಯಗಳನ್ನು ಸುಧಾರಿಸುತ್ತದೆ. ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆಯ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ಜೀವನದಲ್ಲಿನ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಕೂಡಾ ಸಿದ್ಧಗೊಳಿಸಲು ಸಹಕಾರಿ. ಭಾರತದಂತಹ ದೇಶದಲ್ಲಿ ಈ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಅಧಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವಾ ಹೇಳಿದರು.

ಅವರು ಮಂಗಳೂರು ಊರ್ವ ಸ್ಟೋರ್ ಬಳಿಯ “ತುಳು ಭವನ” “ಅಮೃತ ಸೋಮೇಶ್ವರ” ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದೊಂದಿಗೆ ನಿರಂತರ 5 ದಿನ 9 ಸುತ್ತುಗಳಲ್ಲಿ ನಡೆಯುವ ರಾಷ್ಟ್ರೀಯ ಓಪನ್/ಕ್ಲಾಸಿಕಲ್ ಪಿಡೇ ರೇಟೆಡ್ ಚೆಸ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಗೌರವಾಧ್ಯಕ್ಷ ಸುನೀಲ್ ಆಚಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತುಳು ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್‌, ಉದ್ಯಮಿ ರವಿರಾಜ್ ಶೆಟ್ಟಿ, ಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಅನಿಲ್ ಲೋಬೋ, ಉದ್ಯಮಿ ದಿವಾಕರ ಕದ್ರಿ, ರೋಟರಿ ಕ್ಲಬ್ ಮಂಗಳೂರು ಇದರ ಅಧ್ಯಕ್ಷ ಭಾಸ್ಕರ್ ರೈ ಕಟ್ಟ, ರಾಜ್ಯ ಚೆಸ್‌ ಎಸೋಸಿಯೇಶನ್‌ ಉಪಾಧ್ಯಕ್ಷ ರಮೇಶ್‌ ಕೋಟೆ , ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಎಸೋಸಿಯೇಶನ್‌ ಪದಾಧಿಕಾರಿಗಳಾದ ವಾಣಿ ಎಸ್ ಪಣಿಕ್ಕರ್, ಸತ್ಯಪ್ರಸಾದ್ ಕಮಿಲ, ರಮ್ಯ ಎಸ್‌ ರೈ, ಕೃತಿನ್‌ ಕುಮಾರ್‌, ನಾರಾಯಣ ಎಲ್‌, ನಿಶಾ ಪಣಿಕ್ಕರ್‌, ಶುಭಮಂಗಳ ಮೊದಲಾದವರು ಇದ್ದರು. ಪಂದ್ಯಾಟದಲ್ಲಿ 250 ಕ್ಕೂ ಅಧಿಕ ಚೆಸ್‌ ಕ್ರೀಡಾಳುಗಳು ಪಾಲ್ಗೊಂಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror