Advertisement
MIRROR FOCUS

ಅ.2 : ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ |

Share

ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,  ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ  ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್,  ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್‌  ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ  ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ,  ಜೊತೆ ಖಜಾಂಜಿ  ರಮ್ಯಾ ಎಸ್ ರೈ ಇದ್ದರು.‌ …..ಮುಂದೆ ಓದಿ….

ರಮೇಶ್‌ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago