Advertisement
MIRROR FOCUS

ಅ.2 : ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ |

Share

ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement

ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,  ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ  ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್,  ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್‌  ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ  ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ,  ಜೊತೆ ಖಜಾಂಜಿ  ರಮ್ಯಾ ಎಸ್ ರೈ ಇದ್ದರು.‌ …..ಮುಂದೆ ಓದಿ….

ರಮೇಶ್‌ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago