Advertisement
MIRROR FOCUS

ಅ.2 : ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ |

Share

ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್  2 ಮತ್ತು 3ರಂದು ಮಂಗಳೂರು ಟೌನ್ ಹಾಲ್ ನಲ್ಲಿ 9 ರೌಂಡ್ ಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಅಧ್ಯಕ್ಷ ರಮೇಶ್‌ ಕೋಟೆ ತಿಳಿಸಿದ್ದಾರೆ.…..ಮುಂದೆ ಓದಿ….

ಚೆಸ್ ದಿನೇ ದಿನೇ ಬಹಳ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು,  ದ ಕ ಜಿಲ್ಲೆಯಲ್ಲೂ ಹಲವಾರು ಮಂದಿ ಕ್ರೀಡಾಪಟುಗಳು ಇದ್ದಾರೆ. ಈಗಾಗಲೇ  ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಆಟಗಾರರನ್ನು ದ ಕ ಜಿಲ್ಲೆ ಹೊಂದಿದೆ.ಚೆಸ್ ಆಟದ ಬೆಳವಣಿಗೆಯ ಪೂರಕವಾಗಿ ಎಸೋಸಿಯೇಶನ್ ಈ ಪಂದ್ಯಾಟವನ್ನು ಹಮ್ಮಿಕೊಂಡಿದ್ದು,ಇದರಲ್ಲಿ,ಬೇರೆ ಬೇರೆ ರಾಜ್ಯಗಳ ಆಟಗಾರರು ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಆಟಗಾರರ ಸಹಿತ ಸುಮಾರು 400 ಆಟಗಾರರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟನೆಯನ್ನು ಅ 2 ರಂದು MRPL ನ ಆಡಳಿತ ಮಂಡಳಿ ನಿರ್ದೇಶಕ ಸುದರ್ಶನ್ ನೆರವೇರಿಸಲಿರುವರು.
ಮುಖ್ಯ ಅತಿಥಿಗಳಾಗಿ KSCA ಜನರಲ್ ಸೆಕ್ರೆಟರಿ ಅರವಿಂದ ಶಾಸ್ತ್ರಿ, ಶ್ರೀಶಾ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಗುರುರಾಜ್,  ಭಾಗವಹಿಸಲಿರುವರು. ಅ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ MRPL ನ GGM ಕೃಷ್ಣ ಹೆಗ್ಡೆ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಟೂರ್ನಿಯಲ್ಲಿ2.4 ಲಕ್ಷ ನಗದು ಬಹುಮಾನ,ಅಲ್ಲದೇ ಅಕ್ಟೋಬರ್ 3ರಂದು ಮಧ್ಯಾಹ್ನ ನಂತರ Blitz ಚೆಸ್ ಪಂದ್ಯಟವನ್ನೂ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ವಿವಿಧ ವಿಭಾಗಗಳ ಟ್ರೋಫಿಜೊತೆಗೆ ಸುಮಾರು ನೂರೈವತ್ತಕ್ಕೂ ಮಿಕ್ಕಿ ಬಹುಮಾನಗಳು ಇರಲಿವೆ.ಮಂಗಳೂರಿನ MRPL ಸಂಸ್ಥೆ ಚೆಸ್ ಪಂದ್ಯಾವಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ದ.ಕ ಜಿಲ್ಲೆಯ ಸಂಪೂರ್ಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದೆ ಎಂದು ರಮೇಶ್‌  ಕೋಟೆ ತಿಳಿಸಿದ್ದಾರೆ.

ಈ ಸಂದರ್ಭ ದಕ್ಷಿಣ ಕನ್ನಡ ಚೆಸ್‌ ಎಸೋಸಿಯೇಶನ್‌ (DKCA) ಗೌರವಾಧ್ಯಕ್ಷ  ಸುನೀಲ್ ಆಚಾರ್ , ಉಪಾಧ್ಯಕ್ಷೆ ವಾಣಿ ಎಸ್ ಪಣಿಕ್ಕರ್ , ಖಜಾಂಜಿ  ಪೂರ್ಣಿಮಾ ಎಸ್ ಆಳ್ವಾ , ಜೊತೆಕಾರ್ಯದರ್ಶಿ ಸತ್ಯಪ್ರಸಾದ್ ಕಮಿಲ,  ಜೊತೆ ಖಜಾಂಜಿ  ರಮ್ಯಾ ಎಸ್ ರೈ ಇದ್ದರು.‌ …..ಮುಂದೆ ಓದಿ….

ರಮೇಶ್‌ ಕೋಟೆ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago