Advertisement
ಸುದ್ದಿಗಳು

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ

Share

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ ನಡೆಯಿತು.

ಧ್ವಜಾರೋಹಣವನ್ನು ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ನೆರವೇರಿಸಿದರು. ಸಭಾಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ.ಅಧ್ಯಕ್ಷ ಬಾಬು.ಕೆ.ಎಂ ದೀಪಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸುಳ್ಯ ತಾಲೂಕು ಸೇವಾದಳದ ಅಧ್ಯಕ್ಷ ಪ್ರೊ.ಕೆ.ವಿ.ದಾಮೋದರ ಗೌಡ ವಹಿಸಿದರು.
ಮುಖ್ಯ ಅತಿಥಿಗಳಾಗಿ ಭಾರತ್ ಸೇವಾದಳದ ಜಿಲ್ಲಾಧ್ಯಕ್ಷ ಜಯರಾಮ ರೈ, ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಇ., ಸದಸ್ಯರಾದ ತಿರುಮಲೇಶ್ವರಿ‌ ಡಿ., ಸಂದೀಪ್ ಕುಮಾರ್ ಪಿ.ಆರ್, ಸತೀಶ್ ಎನ್.ಎಂ, ನಿವೃತ್ತ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ ಉಪಾಧ್ಯಕ್ಷ ಡಾ.ಎಸ್.ರಂಗಯ್ಯ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ, ಖಜಾಂಜಿ ಶ್ರೀನಿವಾಸ ಭಟ್ ಡಿ. ಭಾಗವಹಿಸಿದರು.
ವೇದಿಕೆಯಲ್ಲಿ ಸುಳ್ಯ ತಾಲೂಕು ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಯಸ್ವಿನಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ, ಸುಳ್ಯ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ, ಶಿಕ್ಷಣ ಸಂಯೋಜಕರಾದ ನಳಿನಿ ಕಿರ್ಲಾಯ, ಸಂಧ್ಯಾ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಭಾಗವಹಿಸಿದರು. ಭಾರತ ಸೇವಾದಳದ ಸಂಘಟಕ ಟಿ.ಎಸ್.ಮಂಜೇಗೌಡ ಪ್ರಾಸ್ತಾವಿಕ ಮಾತನಾಡಿದರು.
ಪುರಮೆರವಣಿಗೆಯನ್ನು ಜಾಲ್ಸೂರು ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಉದ್ಘಾಟಿಸಿದರು. ಬಳಿಕ ಜಾಲ್ಸೂರು ಪೇಟೆಯಲ್ಲಿ ಮೆರವಣಿಗೆ ನಡೆಯಿತು.
ಪಯಸ್ವಿನಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಶಾಖಾ ನಾಯಕ ಶಿವಪ್ರಸಾದ್ ಕೆ ಗೌರವ ಸಲಾಮ್ ನೆರವೇರಿಸಿ, ಕಾರ್ಯಕ್ರಮದ ನೇತೃತ್ವವನ್ನು ವಹಿಸಿದರು. ಪಯಸ್ವಿನಿ ಪ್ರೌಢಶಾಲಾ ಶಿಕ್ಷಕರಾದ ಶಿವಪ್ರಕಾಶ್ ಸ್ವಾಗತಿಸಿ, ಮೀನಕುಮಾರಿ ವಂದಿಸಿದರು. ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

10 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago