ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ – ಸಚಿವ ಚಲುವರಾಯಸ್ವಾಮಿ ಚಾಲನೆ

January 23, 2026
7:03 AM

2031ರೊಳಗೆ ದೇಶಾದ್ಯಂತ ನೈಸರ್ಗಿಕ ಕೃಷಿಯನ್ನು ವಿಸ್ತರಿಸುವ ಉದ್ದೇಶದೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಸ್ವ-ಸಹಾಯ ಗುಂಪುಗಳ ನೇತೃತ್ವದಲ್ಲಿ ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಸಮಾವೇಶಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಡಾ. ಶರಣ ಪ್ರಕಾಶ್ ಪಾಟೀಲ್, ಮಹಿಳೆಯರ ಮೂಲಕ ಸಮಾಜದಲ್ಲಿ ಯಾವುದೇ ಬದಲಾವಣೆ ಸಾಧ್ಯ ಎಂಬ ನಂಬಿಕೆ ಕರ್ನಾಟಕ ಸರ್ಕಾರಕ್ಕಿದ್ದು, ಮಹಿಳೆಯರ ಬದುಕಿಗೆ ಸುಸ್ಥಿರತೆ ಒದಗಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಮಾತನಾಡಿ, ನೈಸರ್ಗಿಕ ಕೃಷಿ ಪ್ರತಿಯೊಂದು ರಾಜ್ಯದಲ್ಲೂ ಸವಾಲಾಗಿದ್ದು, ಸಮಾವೇಶದಲ್ಲಿ ಕೇವಲ ಚರ್ಚೆಗಷ್ಟೇ ಸೀಮಿತವಾಗದೇ, ಅದನ್ನು ನೆಲಮಟ್ಟದಲ್ಲಿ ಹೇಗೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂಬ ಕುರಿತು ಫಲಪ್ರದ ಚಿಂತನೆ ನಡೆಯಬೇಕಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ , ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು, ಈ ಕೃಷಿ ಪದ್ಧತಿಯ ಲಾಭಗಳ ಕುರಿತು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡು, ನೈಸರ್ಗಿಕ ಕೃಷಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ  ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಉಪ ಕಾರ್ಯದರ್ಶಿ ಗುಲ್ ವೀಣಾ ಬಧಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ
May 30, 2026
3:35 PM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ
May 30, 2026
7:08 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?
May 29, 2026
10:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!
May 29, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror