Advertisement
ಸುದ್ದಿಗಳು

ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ – ಸಚಿವ ಚಲುವರಾಯಸ್ವಾಮಿ ಚಾಲನೆ

Share

2031ರೊಳಗೆ ದೇಶಾದ್ಯಂತ ನೈಸರ್ಗಿಕ ಕೃಷಿಯನ್ನು ವಿಸ್ತರಿಸುವ ಉದ್ದೇಶದೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಸ್ವ-ಸಹಾಯ ಗುಂಪುಗಳ ನೇತೃತ್ವದಲ್ಲಿ ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಸಮಾವೇಶಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಡಾ. ಶರಣ ಪ್ರಕಾಶ್ ಪಾಟೀಲ್, ಮಹಿಳೆಯರ ಮೂಲಕ ಸಮಾಜದಲ್ಲಿ ಯಾವುದೇ ಬದಲಾವಣೆ ಸಾಧ್ಯ ಎಂಬ ನಂಬಿಕೆ ಕರ್ನಾಟಕ ಸರ್ಕಾರಕ್ಕಿದ್ದು, ಮಹಿಳೆಯರ ಬದುಕಿಗೆ ಸುಸ್ಥಿರತೆ ಒದಗಿಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಮಾತನಾಡಿ, ನೈಸರ್ಗಿಕ ಕೃಷಿ ಪ್ರತಿಯೊಂದು ರಾಜ್ಯದಲ್ಲೂ ಸವಾಲಾಗಿದ್ದು, ಸಮಾವೇಶದಲ್ಲಿ ಕೇವಲ ಚರ್ಚೆಗಷ್ಟೇ ಸೀಮಿತವಾಗದೇ, ಅದನ್ನು ನೆಲಮಟ್ಟದಲ್ಲಿ ಹೇಗೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂಬ ಕುರಿತು ಫಲಪ್ರದ ಚಿಂತನೆ ನಡೆಯಬೇಕಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ , ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದ್ದು, ಈ ಕೃಷಿ ಪದ್ಧತಿಯ ಲಾಭಗಳ ಕುರಿತು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡು, ನೈಸರ್ಗಿಕ ಕೃಷಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ  ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಉಪ ಕಾರ್ಯದರ್ಶಿ ಗುಲ್ ವೀಣಾ ಬಧಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

6 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

11 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

19 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

20 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago