ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ , ಮಂಗಳೂರು ವತಿಯಿಂದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026 ಆಗಸ್ಟ್ 2 ರಿಂದ 8 ರವರೆಗೆ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಕಳೆದ ಎಂಟು ವರ್ಷಗಳಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದ್ದು, ಇದೀಗ ಮತ್ತೊಮ್ಮೆ ಜಿಲ್ಲೆಯ ಕೀರ್ತಿಗೆ ಮತ್ತೊಂದು ಗರಿ ಸೇರಿಸುವಂತೆ ರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಚಾಂಪಿಯನ್ಶಿಪ್ಗೆ ಆತಿಥ್ಯ ವಹಿಸುತ್ತಿದೆ.
ಈ ಚಾಂಪಿಯನ್ಶಿಪ್ನಲ್ಲಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ 600 ಕ್ಕೂ ಅಧಿಕ ಆಟಗಾರರು, ತರಬೇತುದಾರರು ಮತ್ತು ಪೋಷಕರು ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕಕ್ಕೆ ಹಾಗೂ ವಿಶೇಷವಾಗಿ ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದ ಈ ಚೆಸ್ ಪಂದ್ಯಾವಳಿ ಆಯೋಜನೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನಿಲ್ ಆಚಾರ್, ಅಧ್ಯಕ್ಷ ಡಾ. ಅಮರಶ್ರೀ ಅಮರನಾಥ ಶೆಟ್ಟಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ಉಪಾಧ್ಯಕ್ಷೆ ಡಾ. ವಾಣಿ ಎಸ್. ಪಣಿಕ್ಕರ್ ಹಾಗೂ ಖಜಾಂಚಿ ಕ್ರತಿನ್ ಕುಮಾರ್ ತಿಳಿಸಿದ್ದಾರೆ.
Dakshina Kannada Chess Association will host the National Under-11 Open & Girls Chess Championship 2026 from August 2 to 8 at Urwa Indoor Stadium, Mangaluru. More than 600 players, coaches and parents from across India are expected to participate in the prestigious national event.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…