ಪ್ರಾಕೃತಿಕ ವಿಕೋಪ | ಹೀಗೊಂದು ಮಲೆಯಾಳಂ ಸಂದೇಶ | ಎಚ್ಚರಿಸುವ ಸಂದೇಶ ಅಂದೇ ಇತ್ತು..!

August 8, 2024
10:31 PM

ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಈ ಬಾರಿಯ ಮಳೆಗೆ ಭೂಕುಸಿತವಾಗಿದೆ. ಕೇರಳದ ವಯನಾಡಿನಲ್ಲಿ ಭೀಕರ ದುರಂತವೇ ನಡೆದಿದೆ. ಈ ನಡುವೆ ಹಲವು ಎಚ್ಚರಿಕೆಗಳನ್ನೂ ನೀಡಲಾಗಿದೆ. ಆದರೆ ಅನೇಕ ವರ್ಷಗಳ ಹಿಂದೆ ವಿಜ್ಞಾನ ಮಾಸ ಪತ್ರಿಕೆಯೊಂದರಲ್ಲಿ ಪ್ರಕಟವಾದ ಅಧ್ಭುತ ಸಂದೇಶ ಈ ದಿನಮಾನದಲ್ಲಿ ಹೆಚ್ಚು ಪ್ರಸ್ತುತ ಅನಿಸುತ್ತದೆ. ಇದನ್ನು  ಕೆ ಪಿ ನಾಭ ಐಲ್ ಅವರು ಸಂಗ್ರಹಾನುವಾದ ಮಾಡಿದ್ದಾರೆ. ಪರಿಸರ ಪ್ರೇಮಿ ಬಾಳಿಲದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಕಡತದಲ್ಲಿದ್ದ ಈ ಸಂಗ್ರಹ ಮತ್ತೆ ಇಲ್ಲಿ ಪ್ರಕಟಿಸಲಾಗಿದೆ.

ಇಂದು ಮಳೆ ನುಡಿಯಿತು…
ಅಂದು ನಾನು ಹಲವು ಬಾರಿ ಹೇಳಿದ್ದೆ..ಬೇಡ, ಬೇಡ ಅಂತ
ನೀವು ನನ್ನ ದಾರಿ ಅಡ್ಡಗಟ್ಟಿದಿರಿ…
ಹೊಳೆಯೂ ಹೇಳಿತು..
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ ನನ್ನ ದಡವನ್ನು ಆಕ್ರಮಿಸಿದಿರಿ…
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ .. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ .. ಜಲಾಶಯಕ್ಕೆ ಮಣ್ಣು ತುಂಬಿದಿರಿ….
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ – ಮಳೆಗೆ ಅಲುಗಾಡದೆ ಗಟ್ಟಿಯಾಗಿ ನಿಂತಿದ್ದೆ.. ಆದರೆ ನೀವು ನನ್ನ ಕಾಲು ತುಂಡರಿಸಿದಿರಿ.. ನನಗೆ ಕಾಲು ಗಟ್ಟಿ ಊರಲು ಆಗದೆ ಭೂಮಿ ಕುಸಿದು ಬೀಳುತ್ತಿದೆ..
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ ?. ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ ? ನಾನು ನನ್ನ ಪಾಡಿಗೆ ಹೋಗುವೆ…

ಈಗ ಭೂಮಿ ಕೇಳುತ್ತಿದೆ..
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯವನ್ನು ವಾಪಸ್ಸು ಕೊಡುವಿರಾ ? .. ನಾನಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ..
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ ?
ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ..
ನೆನಪಿರಲಿ
ನಾವು ಮಾನವರು ಪ್ರಕೃತಿಯ ಕಾವಲುಗಾರರು ಮಾತ್ರ, ಒಡೆಯರಲ್ಲ..
ಮರೆತರೆ
ಪ್ರಕೃತಿಯೇ…ಅದು ಏನೆಂಬುದನ್ನು ನಮಗೆ ಕಲಿಸಿಕೊಡುತ್ತದೆ
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ

ಸಂಗ್ರಹಾನುವಾದ : ಕೆ ಪಿ ನಾಭ ಐಲ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror