Advertisement
ಸುದ್ದಿಗಳು

ಪ್ರಾಕೃತಿಕ ವಿಕೋಪ | ಹೀಗೊಂದು ಮಲೆಯಾಳಂ ಸಂದೇಶ | ಎಚ್ಚರಿಸುವ ಸಂದೇಶ ಅಂದೇ ಇತ್ತು..!

Share

ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಈ ಬಾರಿಯ ಮಳೆಗೆ ಭೂಕುಸಿತವಾಗಿದೆ. ಕೇರಳದ ವಯನಾಡಿನಲ್ಲಿ ಭೀಕರ ದುರಂತವೇ ನಡೆದಿದೆ. ಈ ನಡುವೆ ಹಲವು ಎಚ್ಚರಿಕೆಗಳನ್ನೂ ನೀಡಲಾಗಿದೆ. ಆದರೆ ಅನೇಕ ವರ್ಷಗಳ ಹಿಂದೆ ವಿಜ್ಞಾನ ಮಾಸ ಪತ್ರಿಕೆಯೊಂದರಲ್ಲಿ ಪ್ರಕಟವಾದ ಅಧ್ಭುತ ಸಂದೇಶ ಈ ದಿನಮಾನದಲ್ಲಿ ಹೆಚ್ಚು ಪ್ರಸ್ತುತ ಅನಿಸುತ್ತದೆ. ಇದನ್ನು  ಕೆ ಪಿ ನಾಭ ಐಲ್ ಅವರು ಸಂಗ್ರಹಾನುವಾದ ಮಾಡಿದ್ದಾರೆ. ಪರಿಸರ ಪ್ರೇಮಿ ಬಾಳಿಲದ ಪಿಜಿಎಸ್‌ಎನ್‌ ಪ್ರಸಾದ್‌ ಅವರ ಕಡತದಲ್ಲಿದ್ದ ಈ ಸಂಗ್ರಹ ಮತ್ತೆ ಇಲ್ಲಿ ಪ್ರಕಟಿಸಲಾಗಿದೆ.

ಇಂದು ಮಳೆ ನುಡಿಯಿತು…
ಅಂದು ನಾನು ಹಲವು ಬಾರಿ ಹೇಳಿದ್ದೆ..ಬೇಡ, ಬೇಡ ಅಂತ
ನೀವು ನನ್ನ ದಾರಿ ಅಡ್ಡಗಟ್ಟಿದಿರಿ…
ಹೊಳೆಯೂ ಹೇಳಿತು..
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ ನನ್ನ ದಡವನ್ನು ಆಕ್ರಮಿಸಿದಿರಿ…
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ .. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ .. ಜಲಾಶಯಕ್ಕೆ ಮಣ್ಣು ತುಂಬಿದಿರಿ….
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ – ಮಳೆಗೆ ಅಲುಗಾಡದೆ ಗಟ್ಟಿಯಾಗಿ ನಿಂತಿದ್ದೆ.. ಆದರೆ ನೀವು ನನ್ನ ಕಾಲು ತುಂಡರಿಸಿದಿರಿ.. ನನಗೆ ಕಾಲು ಗಟ್ಟಿ ಊರಲು ಆಗದೆ ಭೂಮಿ ಕುಸಿದು ಬೀಳುತ್ತಿದೆ..
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ ?. ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ ? ನಾನು ನನ್ನ ಪಾಡಿಗೆ ಹೋಗುವೆ…

ಈಗ ಭೂಮಿ ಕೇಳುತ್ತಿದೆ..
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯವನ್ನು ವಾಪಸ್ಸು ಕೊಡುವಿರಾ ? .. ನಾನಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ..
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ ?
ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ..
ನೆನಪಿರಲಿ
ನಾವು ಮಾನವರು ಪ್ರಕೃತಿಯ ಕಾವಲುಗಾರರು ಮಾತ್ರ, ಒಡೆಯರಲ್ಲ..
ಮರೆತರೆ
ಪ್ರಕೃತಿಯೇ…ಅದು ಏನೆಂಬುದನ್ನು ನಮಗೆ ಕಲಿಸಿಕೊಡುತ್ತದೆ
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ

ಸಂಗ್ರಹಾನುವಾದ : ಕೆ ಪಿ ನಾಭ ಐಲ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 hour ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

2 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

24 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago