Advertisement
ವಿಶೇಷ ವರದಿಗಳು

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

Share

ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಕೀಟನಾಶಕಗಳು ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಕೃಷಿ ಭೂಮಿಯ ಫಲವತ್ತತೆ, ಸಾರ್ವಜನಿಕ ಆರೋಗ್ಯ ಹಾಗೂ ಕೃಷಿಯ ದೀರ್ಘಕಾಲೀನ ಸುಸ್ಥಿರತೆಗೆ ಹಾನಿಕಾರಕವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಮಸ್ಯೆಗೆ ನೈಸರ್ಗಿಕ ಕೃಷಿಯೇ ಪರಿಣಾಮಕಾರಿ ಪರಿಹಾರ ಎಂದು ಅವರು ಪ್ರತಿಪಾದಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ನಡೆದ ರೈತ ಕಲ್ಯಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಸುಮಾರು 20 ಲಕ್ಷ ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರೈತರು ರಾಸಾಯನಿಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ನೈಸರ್ಗಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಇತ್ತೀಚೆಗೆ ಗುಂಟೂರು ಪ್ರದೇಶದಿಂದ ರಫ್ತಾಗಿದ್ದ ಮೆಣಸಿನಕಾಯಿ ಸಾಗಣೆಗಳಲ್ಲಿ ಕೀಟನಾಶಕ ಅವಶೇಷಗಳು (Pesticide Residues) ಪತ್ತೆಯಾದ ಹಿನ್ನೆಲೆಯಲ್ಲಿ ಕೆಲವು ವಿದೇಶಿ ಮಾರುಕಟ್ಟೆಗಳು ಸರಕುಗಳನ್ನು ಹಿಂತಿರುಗಿಸಿವೆ ಎಂದು ಉಲ್ಲೇಖಿಸಿದ ಅವರು, ಜಾಗತಿಕ ಮಾರುಕಟ್ಟೆಯಲ್ಲಿ ಗುಣಮಟ್ಟ ಮತ್ತು ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ನೈಸರ್ಗಿಕ ಕೃಷಿ ಉತ್ಪನ್ನಗಳಿಗೆ ವಿಶೇಷ ಮಾರುಕಟ್ಟೆ ವ್ಯವಸ್ಥೆ, ರೈತ ಬಜಾರ್‌ಗಳಲ್ಲಿ ಪ್ರತ್ಯೇಕ ಕೌಂಟರ್‌ಗಳು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಹೆಚ್ಚಿನ ಸಂಶೋಧನೆ ಮತ್ತು ಪ್ರಚಾರಕ್ಕೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಆಳ ನೋಟ | Rural Mirror Analysis – ಕರ್ನಾಟಕದ ಕೃಷಿಕರಿಗೆ ಈ ಸಂದೇಶ ಏನು ಹೇಳುತ್ತದೆ?

ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಕೇವಲ ಉತ್ಪಾದನೆ ಸಾಕಾಗುವುದಿಲ್ಲ. ಉತ್ಪನ್ನದಲ್ಲಿ ಕೀಟನಾಶಕ ಅವಶೇಷಗಳ ಪ್ರಮಾಣ ಮಾನದಂಡದೊಳಗಿರಬೇಕು. ಹೀಗಾಗಿ ಎಲ್ಲಾ ಕೃಷಿಕರೂ ಈ ಬಗ್ಗೆ ಗಮನಿಸಬೇಕು. ಅದರಲ್ಲೂ ವಿಶೇಷವಾಗಿ ರಫ್ತು ಮಾಡುವ ಕೃಷಿ ವಸ್ತುಗಳ ಕಡೆಗೆ ವಿಶೇಷ ಆದ್ಯತೆ ಬೇಕಾಗಿದೆ. ಕರಿಮೆಣಸು, ಕಾಫಿ, ಏಲಕ್ಕಿ ಬೆಳೆಗಾರರು ಈ ವಿಚಾರಕ್ಕೆಈಗ ಹೆಚ್ಚಿನ ಗಮನ ನೀಡಬೇಕಾಗಿದೆ. ಹೆಚ್ಚಿನ ರಾಸಾಯನಿಕ ಬಳಕೆಯಿಂದ ಮಣ್ಣಿನ ಸಾವಯವ ಅಂಶ ಕಡಿಮೆಯಾಗುವುದು, ಸೂಕ್ಷ್ಮಜೀವಿಗಳ ಚಟುವಟಿಕೆ ಕುಗ್ಗುವುದು ಮತ್ತು ಉತ್ಪಾದನಾ ವೆಚ್ಚ ಏರಿಕೆಯಾಗುವುದು ದೇಶದ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ. ನೈಸರ್ಗಿಕ ಕೃಷಿಯ ಕುರಿತು ನಡೆಯುತ್ತಿರುವ ಚರ್ಚೆಯ ಕೇಂದ್ರಬಿಂದುವೂ ಇದೇ ಆಗಿದೆ.

ತಜ್ಞರ ಅಭಿಪ್ರಾಯದಂತೆ, ನೈಸರ್ಗಿಕ ಕೃಷಿಯ ಮೂಲ ಉದ್ದೇಶ ಮಣ್ಣಿನ ಆರೋಗ್ಯವನ್ನು ಸುಧಾರಿಸುವುದು ಮತ್ತು ಹೊರಗಿನ ಇನ್‌ಪುಟ್‌ಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು. ಆದರೆ, ವೈಜ್ಞಾನಿಕ ನಿರ್ವಹಣೆ ಇಲ್ಲದೆ ಸಂಪೂರ್ಣ ರಾಸಾಯನಿಕ ತ್ಯಜಿಸುವುದು ಕೆಲ ಬೆಳೆಗಳಲ್ಲಿ ಸವಾಲುಗಳನ್ನು ಉಂಟುಮಾಡಬಹುದು. ಹೀಗಾಗಿ ಎಚ್ಚರಿಕೆಯ ಹೆಜ್ಜೆಯೂ ಕೃಷಿಕರಿಗೆ ಅನಿವಾರ್ಯ ಇದೆ. ಒಮ್ಮೆಲೇ ಕೃಷಿ ಪದ್ಧತಿ ಬದಲಾಯಿಸುವುದು ಕೂಡಾ ಕಷ್ಟವಿದೆ.

ಆಂಧ್ರ ಪ್ರದೇಶದ ಸಮುದಾಯ ಆಧಾರಿತ ನೈಸರ್ಗಿಕ ಕೃಷಿ (APCNF) ಕಾರ್ಯಕ್ರಮವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, 2026ರ Food Planet Prize ಪ್ರಶಸ್ತಿಯನ್ನೂ ಪಡೆದಿದೆ. ಈ ಮಾದರಿಯ ಯಶಸ್ಸು ಇತರ ರಾಜ್ಯಗಳ ಕೃಷಿ ನೀತಿಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಸುದ್ದಿಗೆ ನಿಮ್ಮ ಅಭಿಪ್ರಾಯ-ಕಮೆಂಟ್‌ ಮೂಲಕ ಇಲ್ಲಿ ತಿಳಿಸಿ…

Andhra Pradesh Chief Minister N. Chandrababu Naidu has said that natural farming is the best antidote to the excessive use of pesticides and chemical fertilizers. He warned that chemical-intensive agriculture harms soil health, public health, and long-term sustainability, while emphasizing the need for residue-free agricultural production and expansion of natural farming practices.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

1 hour ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

9 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

19 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

19 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

24 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago