Advertisement
ಸುದ್ದಿಗಳು

ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ತರಬೇತಿ – ಮನುಷ್ಯ ಆರೋಗ್ಯಕ್ಕೆ ನೈಸರ್ಗಿಕ ಕೃಷಿ ಅಗತ್ಯ

Share

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಆಶ್ರಯದಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿಯಲ್ಲಿ ಕೃಷಿ ಸಖಿಯರಿಗೆ “ನೈಸರ್ಗಿಕ ಕೃಷಿ” ಕುರಿತು ಐದು ದಿನಗಳ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಚಾಲನೆ ನೀಡಿದರು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್ ಆರ್. ಚವ್ಹಾಣ್, ರಾಯಚೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪವಾರ್, ಸಾವಯವ ಕೃಷಿ ಸಂಶೋಧನಾ ಸಂಸ್ಥೆ  ಮುಖ್ಯಸ್ಥ ಡಾ.ಎಂ. ಬಸವಣ್ಣೆಪ್ಪ, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್ ಮತ್ತು ಕೃಷಿ ಸಖಿಯರು ಉಪಸ್ಥಿತರಿದ್ದರು.  ‌

ಬಳಿಕ ಡಾ.ಹನುಮಂತಪ್ಪ, ಮಣ್ಣಿನ ಆರೋಗ್ಯವೇ ನಮ್ಮ ಆರೋಗ್ಯವಾಗಿದೆ. ಪ್ರಕೃತಿ ಜನ್ಯ ವಸ್ತುಗಳು ನೈಸರ್ಗಿಕ ಕೃಷಿ ಪದ್ಧತಿಗೆ ಆಧಾರವಾಗಿವೆ. ಮಾನವ ಮತ್ತು ಪ್ರಕೃತಿ ಸಮತೋಲನಕ್ಕಾಗಿ ನೈಸರ್ಗಿಕ ಕೃಷಿ ಪದ್ದತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಪ್ರಸ್ತುತ ಮಣ್ಣಿನ ಗುಣಧರ್ಮ ನಾಶವಾಗಿದ್ದು, ಸೂಕ್ಷ್ಮಾಣು ಜೀವಿಗಳ ವೃದ್ಧಿಗೆ ಅವಕಾಶ ನೀಡಬೇಕಾಗಿದೆ ಎಂದರು.

ಪ್ರಕಾಶ್ ಚವ್ಹಾಣ್ ಮಾತನಾಡಿ,  ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಮತ್ತು ರೈತರ ನಡುವೆ ಸಂಪರ್ಕ ಕೊಂಡಿಯಾಗಿ ಸೇವೆ ಸಲ್ಲಿಸುತ್ತಿವೆ.  ನೈಸರ್ಗಿಕ ಕೃಷಿ, ಬೆಳೆ ಸಮೀಕ್ಷೆ ನೋಂದಣಿ, ಕೃಷಿಯಲ್ಲಿ ಪೋಷಕಾಂಶಗಳ ನಿರ್ವಹಣೆ ಸೇರಿದಂತೆ ಎಲ್ಲ ರೀತಿಯ ಸರ್ಕಾರದ ಯೋಜನೆಗಳ ಕುರಿತಂತೆ ರೈತರಿಗೆ ಅರಿವು ಮೂಡಿಸಬೇಕು ಎಂದರು.

ಡಾ.ಎಂ. ಬಸವಣ್ಣೆಪ್ಪ ಮಾತನಾಡಿ, ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದ, ವಾತಾವರಣದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಇದನ್ನು ಕಡಿಮೆ ಮಾಡಿ, ಮಣ್ಣಿನ ಫಲವತ್ತತೆ ಹೆಚ್ಚಳ ಮಾಡುವ ಸಂಬಂಧ, ಕೃಷಿ ಸಖಿಯರಿಗೆ ತರಬೇತಿ ನೀಡುತ್ತಿದ್ದು, ನೈಸರ್ಗಿಕ ಕೃಷಿಯ ಮೂಲ ತತ್ವಗಳನ್ನು ತಿಳಿಸಲಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago