Advertisement
ಸುದ್ದಿಗಳು

ಸೆಗಣಿಯಿಂದ ಬಣ್ಣ ತಯಾರಿಕೆ … ! | ನೈಸರ್ಗಿಕ ಬಣ್ಣಕ್ಕೀಗ ಡಿಮ್ಯಾಂಡ್ | ಮಹಿಳಾ ಸಬಲೀಕರಣದ ಒಂದು ಹೆಜ್ಜೆ |

Share

ಇಟ್ಟರೆ ಸೆಗಣಿಯಾದೆ ತಟ್ಟಿದರೆ ಕುರುಳಾದೆ
ಸುಟ್ಟರೆ ನೋಸಲಿಗೆ ವಿಭೂತಿಯಾದೆ
ತಟ್ಟದೆ ಹಾಕಿದರೆ ಮೇಲು ಗೊಬ್ಬರವಾದೆ
ನೀನಾರಿಗಾದೆಯೊ ಎಲೆ ಮಾನವಾ

ನಿಜಕ್ಕೂ ಇದು ಸತ್ಯದ ಮಾತು.  ಇತ್ತೀಚಿನ ದಿನಗಳಲ್ಲಿ ಗೋ ಉತ್ಪನ್ನಗಳು ವಿವಿಧ ರೀತಿಯಲ್ಲಿ ಬಳಕೆಯಾಗುತ್ತಿದೆ. ಕೆಲವರು ಗೋ ಉತ್ಪನ್ನಗಳಿಂದ ಅನೇಕ ವಿವಿಧದ ಉತ್ಪನ್ನಗಳನ್ನು ಮಾಡಿ ಜೀವನ ಕಂಡಿಕೊಂಡಿದ್ದಾರೆ.  ಗೋಮೂತ್ರ, ಸೆಗಣಿ, ಹಾಲು ಅಷ್ಟೆ ಅಲ್ಲದೆ ಸತ್ತ ದನದಿಂದಲೂ ಸಾವಯವ ರಸಗೊಬ್ಬರಗಳನ್ನು ಮಾಡಿ ಪ್ರಯೋಜನ ಪಡೆಯುತ್ತಿದ್ದಾರೆ.  ಇಲ್ಲೊಂದು ಮಹಿಳಾ ಸ್ವ ಸಹಾಯ ಗುಂಪು ಸೆಗಣಿ ಮೂಲಕ ತಮ್ಮ ಜೀವನದ ಆದಾಯವನ್ನು ಕಂಡುಕೊಂಡಿದ್ದಾರೆ.

 

ಸೆಗಣಿಯಿಂದ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಮಹಿಳೆಯರು ಸ್ವ ಸಹಾಯ ಗುಂಪು ಮಾಡಿಕೊಂಡು ಸೆಗಣಿಯಿಂದ ನೈಸರ್ಗಿಕ ಬಣ್ಣ, ಚೀಲಗಳನ್ನು ತಯಾರಿಸುತ್ತಿದ್ದಾರೆ. ಆರ್‌ಐಪಿಎ ಅಡಿಯಲ್ಲಿ ಮಹಿಳೆಯರು ಹಸುವಿನ ಸೆಗಣಿಯಿಂದ ನೈಸರ್ಗಿಕ ಬಣ್ಣವನ್ನು ತಯಾರಿಸಲಾಗುತ್ತಿದೆ. ಈ ಬಣ್ಣವು ಸಂಪೂರ್ಣವಾಗಿ ನೈಸರ್ಗಿಕವಾಗಿದೆ, ಇದು ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ತಿಳಿದುಬಂದಿದೆ.

ಛತ್ತೀಸ್‌ಗಢ ಬಿಲಾಸ್‌ಪುರದ ಕೋಟಾ ಪ್ರದೇಶದ ರಾಣಿಗಾಂವ್‌ ಆರ್‌ಐಪಿಎ ಯೋಜನೆಯಡಿ ಹಸುವಿನ ಸೆಗಣಿಯಿಂದ ನೈಸರ್ಗಿಕ ಬಣ್ಣವನ್ನು ಉತ್ಪಾದಿಸುತ್ತಿದೆ. ಈ ಬಣ್ಣವು ಸಂಪೂರ್ಣವಾಗಿ ನೈಸರ್ಗಿಕವಾಗಿದೆ. ಇದು ಯಾವುದೇ ಹಾನಿ ಉಂಟುಮಾಡುವುದಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಬಣ್ಣಗಳಿಗಿಂತ ಇದು ತುಂಬಾ ಅಗ್ಗವಾಗಿದೆ.ಇಲ್ಲಿನ ಜಾಗೃತಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಹಸುವಿನ ಸಗಣಿಯಿಂದ ಬಣ್ಣ ತಯಾರಿಸಿ ಸುಮಾರು 1 ಲಕ್ಷ 80 ಸಾವಿರ ರೂಪಾಯಿ ಸಂಪಾದಿಸಿದ್ದಾರೆ. ಅವರಿಗೆ 45 ಸಾವಿರ ರೂಪಾಯಿ ಲಾಭ ಬಂದಿದೆ. ಹೀಗೆ ತಯಾರಿಸಿದ ಈವರೆಗೆ ಸ್ವಸಹಾಯ ಸಂಘ 870 ಲೀಟರ್‌ ಬಣ್ಣ ಮಾರಾಟ ಮಾಡಿದೆ. ಇನ್ನೂ 7000 ಲೀಟರ್‌ಗೆ ಆರ್ಡರ್‌ ಬಂದಿದೆ ಎನ್ನಲಾಗಿದೆ.

 

ಕೋಟ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುವರಾಜ್ ಸಿನ್ಹಾ ಮಾತನಾಡಿ, ರಾಣಿ ಗ್ರಾಮಾಂತರ ರಿಪಾ ಕೇಂದ್ರದಲ್ಲಿ ಸ್ವಸಹಾಯ ಗುಂಪುಗಳ ಮೂಲಕ ಗ್ರಾಮಸ್ಥರು ಉತ್ತಮ ಆದಾಯಗಳಿಸುತ್ತಿದ್ದಾರೆ. ಈ ರಿಪಾ ಕೇಂದ್ರದ ಸೌಂದರ್ಯೀಕರಣ ಕಾಮಗಾರಿಗಳು ಶೀಘ್ರದಲ್ಲಿ ಪೂರ್ಣಗೊಳ್ಳಲಿವೆ.

ಸರಕಾರ ಕೈಗೊಂಡಿರುವ ಈ ಯೋಜನೆಯಿಂದ ಗ್ರಾಮಸ್ಥರಲ್ಲೂ ಸಂತಸ ಮೂಡಿದೆ. ರಾಣಿಗಾಂವ್‌ನ ರಿಪಾ ಕೇಂದ್ರದಲ್ಲಿ ತುಳಸಿಮಾತಾ ಗ್ರೂಪ್ ಮತ್ತು ಜಾಗೃತಿ ಮಹಿಳಾ ಉಳಿತಾಯ ಗುಂಪಿನಲ್ಲಿ ಒಟ್ಟು 20 ಮಹಿಳೆಯರು ಮತ್ತು 12 ಪುರುಷರು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಈ ರಿಪಾ ಕೇಂದ್ರದಲ್ಲಿ ಬಣ್ಣ, ಚೀಲಗಳ ಜೊತೆಗೆ ಅಗರಬತ್ತಿಗಳ ತಯಾರಿಕೆಯನ್ನೂ ಆರಂಭಿಸುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

3 minutes ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

6 minutes ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

9 minutes ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

12 minutes ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

20 minutes ago

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

3 days ago