Advertisement
ವಿಶೇಷ ವರದಿಗಳು

ರಬ್ಬರ್‌ ರಪ್ತು | ತ್ರಿಪುರಾದಿಂದ ನೇಪಾಳಕ್ಕೆ 14 ಟನ್ ನೈಸರ್ಗಿಕ ರಬ್ಬರ್ ರವಾನೆ |

Share

ಭಾರತದಲ್ಲಿ ಕೇರಳದ ನಂತರ ನೈಸರ್ಗಿಕ ರಬ್ಬರ್‌ ಉತ್ಪಾದನೆಯ ಎರಡನೇ ಅತಿದೊಡ್ಡ ಉತ್ಪಾದಕ ರಾಜ್ಯ ತ್ರಿಪುರಾ. ಇದೀಗ ತ್ರಿಪುರಾದಿಂದ  14 ಟನ್‌ ರಬ್ಬರ್‌ ನೇಪಾಳಕ್ಕೆ ರವಾನಿಸಿದೆ ಎಂದು ರಬ್ಬರ್ ಬೋರ್ಡ್ ಅಧಿಕಾರಿಗಳು  ತಿಳಿಸಿದ್ದಾರೆ.

ರಬ್ಬರ್ ಬೋರ್ಡ್ ಪ್ರವರ್ತಿತ ಮಣಿಮಲಯಾರ್ ರಬ್ಬರ್ಸ್ ಪ್ರೈವೇಟ್ ಲಿಮಿಟೆಡ್ 2020 ರಲ್ಲಿ ತ್ರಿಪುರಾದಿಂದ ನೇಪಾಳಕ್ಕೆ 18 ಟನ್ ನೈಸರ್ಗಿಕ ರಬ್ಬರ್ ರಫ್ತು ಮಾಡಿತ್ತು. ಮಣಿಮಲಯರ್ ರಬ್ಬರ್‌ ಜನರಲ್ ಮ್ಯಾನೇಜರ್ ಅರುಣಾಭಾ ಮಜುಂದಾರ್‌ ಅವರ ಪ್ರಕಾರ,  14,550 ಕೆ.ಜಿ. (ಲ್ಯಾಟೆಕ್ಸ್) ತ್ರಿಪುರಾದಲ್ಲಿ ಉತ್ಪಾದನೆಯಾಗಿದ್ದು, ಇದನ್ನು ಶೂ ಉತ್ಪಾದನೆಗಾಗಿ ಕಠ್ಮಂಡುವಿಗೆ ರವಾನೆ ಮಾಡಲಾಗಿದೆ ಎನ್ನುತ್ತಾರೆ. ನೇಪಾಳಕ್ಕೆ ರಕ್ಸಾಲ್-ಬಿರ್‌ಗುಂಜ್ ಗಡಿ ಮಾರ್ಗದ ಮೂಲಕ ವಾಹನದ ಮೂಲಕ ಸಾಗಿಸಲಾಗಿದೆ.

1997 ರಿಂದ, ಮೇಘಾಲಯದ ಗುವಾಹಟಿ, ಸಿಲ್ಚಾರ್ ಮತ್ತು ತುರಾದಲ್ಲಿ ಕಚೇರಿಗಳನ್ನು ಹೊಂದಿರುವ ಮಣಿಮಲಯರ್ ರಬ್ಬರ್ಸ್ ರೈತರಿಗೆ ಮಾರುಕಟ್ಟೆ ಸಹಾಯವನ್ನು ಒದಗಿಸಿದೆ. ತ್ರಿಪುರಾದಲ್ಲಿ ಪ್ರಸ್ತುತ 89,264 ಹೆಕ್ಟೇರ್ ಭೂಮಿಯಲ್ಲಿ ನೈಸರ್ಗಿಕ ರಬ್ಬರ್  ಬೆಳೆಯುತ್ತದೆ, ವಾರ್ಷಿಕವಾಗಿ 1,691 ಕೋಟಿ ಮೌಲ್ಯದ 93,371 ಟನ್ ರಬ್ಬರ್ ಅನ್ನು ನೀಡುತ್ತದೆ. ತ್ರಿಪುರಾದಲ್ಲಿ, ರಬ್ಬರ್ ಕೃಷಿಯು ಆದಿವಾಸಿಗಳು ಸೇರಿದಂತೆ ಸುಮಾರು ಎರಡು ಲಕ್ಷ ಕುಟುಂಬಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ನೆರವಾಗಿದೆ.

ರಬ್ಬರ್ ಬೋರ್ಡ್ ಅಧಿಕಾರಿಗಳ ಪ್ರಕಾರ, ಏಳು ಈಶಾನ್ಯ ರಾಜ್ಯಗಳು ವಾರ್ಷಿಕವಾಗಿ 1,90,000 ಹೆಕ್ಟೇರ್‌ಗಳಲ್ಲಿ ರಬ್ಬರ್  ಬೆಳೆಯುತ್ತವೆ 1,11,700 ಟನ್ ನೈಸರ್ಗಿಕ ರಬ್ಬರ್ ಅನ್ನು ಉತ್ಪಾದಿಸುತ್ತವೆ. ಅಸ್ಸಾಂ 58,000 ಹೆಕ್ಟೇರ್ ಗಳಲ್ಲಿ ವಾರ್ಷಿಕವಾಗಿ 31,000 ಟನ್ ನೈಸರ್ಗಿಕ ರಬ್ಬರ್ ಅನ್ನು ಉತ್ಪಾದಿಸುತ್ತದೆ. ಮೇಘಾಲಯವು 17,000 ಹೆಕ್ಟೇರ್‌ಗಳಲ್ಲಿ 9,500 ಟನ್‌, ನಾಗಾಲ್ಯಾಂಡ್‌ನಲ್ಲಿ 6,100 ಟನ್‌ಗಳೊಂದಿಗೆ 15,000 ಹೆಕ್ಟೇರ್‌ಗಳಲ್ಲಿ ಉತ್ಪಾದನೆಯಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

8 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

1 day ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

3 days ago