Advertisement
ವಿಶೇಷ ವರದಿಗಳು

ರಬ್ಬರ್‌ ರಪ್ತು | ತ್ರಿಪುರಾದಿಂದ ನೇಪಾಳಕ್ಕೆ 14 ಟನ್ ನೈಸರ್ಗಿಕ ರಬ್ಬರ್ ರವಾನೆ |

Share

ಭಾರತದಲ್ಲಿ ಕೇರಳದ ನಂತರ ನೈಸರ್ಗಿಕ ರಬ್ಬರ್‌ ಉತ್ಪಾದನೆಯ ಎರಡನೇ ಅತಿದೊಡ್ಡ ಉತ್ಪಾದಕ ರಾಜ್ಯ ತ್ರಿಪುರಾ. ಇದೀಗ ತ್ರಿಪುರಾದಿಂದ  14 ಟನ್‌ ರಬ್ಬರ್‌ ನೇಪಾಳಕ್ಕೆ ರವಾನಿಸಿದೆ ಎಂದು ರಬ್ಬರ್ ಬೋರ್ಡ್ ಅಧಿಕಾರಿಗಳು  ತಿಳಿಸಿದ್ದಾರೆ.

ರಬ್ಬರ್ ಬೋರ್ಡ್ ಪ್ರವರ್ತಿತ ಮಣಿಮಲಯಾರ್ ರಬ್ಬರ್ಸ್ ಪ್ರೈವೇಟ್ ಲಿಮಿಟೆಡ್ 2020 ರಲ್ಲಿ ತ್ರಿಪುರಾದಿಂದ ನೇಪಾಳಕ್ಕೆ 18 ಟನ್ ನೈಸರ್ಗಿಕ ರಬ್ಬರ್ ರಫ್ತು ಮಾಡಿತ್ತು. ಮಣಿಮಲಯರ್ ರಬ್ಬರ್‌ ಜನರಲ್ ಮ್ಯಾನೇಜರ್ ಅರುಣಾಭಾ ಮಜುಂದಾರ್‌ ಅವರ ಪ್ರಕಾರ,  14,550 ಕೆ.ಜಿ. (ಲ್ಯಾಟೆಕ್ಸ್) ತ್ರಿಪುರಾದಲ್ಲಿ ಉತ್ಪಾದನೆಯಾಗಿದ್ದು, ಇದನ್ನು ಶೂ ಉತ್ಪಾದನೆಗಾಗಿ ಕಠ್ಮಂಡುವಿಗೆ ರವಾನೆ ಮಾಡಲಾಗಿದೆ ಎನ್ನುತ್ತಾರೆ. ನೇಪಾಳಕ್ಕೆ ರಕ್ಸಾಲ್-ಬಿರ್‌ಗುಂಜ್ ಗಡಿ ಮಾರ್ಗದ ಮೂಲಕ ವಾಹನದ ಮೂಲಕ ಸಾಗಿಸಲಾಗಿದೆ.

1997 ರಿಂದ, ಮೇಘಾಲಯದ ಗುವಾಹಟಿ, ಸಿಲ್ಚಾರ್ ಮತ್ತು ತುರಾದಲ್ಲಿ ಕಚೇರಿಗಳನ್ನು ಹೊಂದಿರುವ ಮಣಿಮಲಯರ್ ರಬ್ಬರ್ಸ್ ರೈತರಿಗೆ ಮಾರುಕಟ್ಟೆ ಸಹಾಯವನ್ನು ಒದಗಿಸಿದೆ. ತ್ರಿಪುರಾದಲ್ಲಿ ಪ್ರಸ್ತುತ 89,264 ಹೆಕ್ಟೇರ್ ಭೂಮಿಯಲ್ಲಿ ನೈಸರ್ಗಿಕ ರಬ್ಬರ್  ಬೆಳೆಯುತ್ತದೆ, ವಾರ್ಷಿಕವಾಗಿ 1,691 ಕೋಟಿ ಮೌಲ್ಯದ 93,371 ಟನ್ ರಬ್ಬರ್ ಅನ್ನು ನೀಡುತ್ತದೆ. ತ್ರಿಪುರಾದಲ್ಲಿ, ರಬ್ಬರ್ ಕೃಷಿಯು ಆದಿವಾಸಿಗಳು ಸೇರಿದಂತೆ ಸುಮಾರು ಎರಡು ಲಕ್ಷ ಕುಟುಂಬಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ನೆರವಾಗಿದೆ.

ರಬ್ಬರ್ ಬೋರ್ಡ್ ಅಧಿಕಾರಿಗಳ ಪ್ರಕಾರ, ಏಳು ಈಶಾನ್ಯ ರಾಜ್ಯಗಳು ವಾರ್ಷಿಕವಾಗಿ 1,90,000 ಹೆಕ್ಟೇರ್‌ಗಳಲ್ಲಿ ರಬ್ಬರ್  ಬೆಳೆಯುತ್ತವೆ 1,11,700 ಟನ್ ನೈಸರ್ಗಿಕ ರಬ್ಬರ್ ಅನ್ನು ಉತ್ಪಾದಿಸುತ್ತವೆ. ಅಸ್ಸಾಂ 58,000 ಹೆಕ್ಟೇರ್ ಗಳಲ್ಲಿ ವಾರ್ಷಿಕವಾಗಿ 31,000 ಟನ್ ನೈಸರ್ಗಿಕ ರಬ್ಬರ್ ಅನ್ನು ಉತ್ಪಾದಿಸುತ್ತದೆ. ಮೇಘಾಲಯವು 17,000 ಹೆಕ್ಟೇರ್‌ಗಳಲ್ಲಿ 9,500 ಟನ್‌, ನಾಗಾಲ್ಯಾಂಡ್‌ನಲ್ಲಿ 6,100 ಟನ್‌ಗಳೊಂದಿಗೆ 15,000 ಹೆಕ್ಟೇರ್‌ಗಳಲ್ಲಿ ಉತ್ಪಾದನೆಯಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago