ರಬ್ಬರ್ ಬೆಲೆ ಐತಿಹಾಸಿಕ ಏರಿಕೆ ಕಂಡಿದೆ. ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಪೂರೈಕೆ ಕೊರತೆ, ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಹೆಚ್ಚುತ್ತಿರುವ ಬೇಡಿಕೆ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ.
ಭಾರತ ಸೇರಿದಂತೆ ಪ್ರಮುಖ ರಬ್ಬರ್ ಉತ್ಪಾದಕ ಪ್ರದೇಶಗಳಲ್ಲಿ ಅತಿಯಾದ ಉಷ್ಣಾಂಶ, ಮಳೆಯ ಕೊರತೆ ಹಾಗೂ ಉತ್ಪಾದನೆ ಕುಸಿತದಿಂದ ಮಾರುಕಟ್ಟೆಯಲ್ಲಿ ಪೂರೈಕೆ ಒತ್ತಡ ಹೆಚ್ಚಾಗಿದೆ. ಥೈಲ್ಯಾಂಡ್, ವಿಯೆಟ್ನಾಂ ಮತ್ತು ಇತರ ಆಗ್ನೇಯ ಏಷ್ಯಾದ ದೇಶಗಳಲ್ಲಿಯೂ ಉತ್ಪಾದನೆ ಅಡಚಣೆ ಎದುರಿಸಿರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್ ಲಭ್ಯತೆ ಕಡಿಮೆಯಾಗಿದೆ.
ವಾಹನೋದ್ಯಮ, ವಿಶೇಷವಾಗಿ ಟೈರ್ ತಯಾರಿಕಾ ಕ್ಷೇತ್ರದಿಂದ ಬೇಡಿಕೆ ಹೆಚ್ಚುತ್ತಿರುವುದು ಮತ್ತೊಂದು ಪ್ರಮುಖ ಕಾರಣವಾಗಿದೆ. ದೇಶೀಯ ಬಳಕೆ ಉತ್ಪಾದನೆಗಿಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕೊರತೆ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರಬ್ಬರ್ ಬೆಲೆ ಏರಿಕೆಯಿಂದ ರೈತರಿಗೆ ಹೆಚ್ಚಿನ ಆದಾಯ ದೊರೆಯುವ ಸಾಧ್ಯತೆ ಇದ್ದರೂ, ಟೈರ್ ಹಾಗೂ ರಬ್ಬರ್ ಉತ್ಪನ್ನ ತಯಾರಿಕಾ ಕಂಪನಿಗಳಿಗೆ ಕಚ್ಚಾ ವಸ್ತು ವೆಚ್ಚ ಹೆಚ್ಚಳದ ಹೊರೆ ಎದುರಾಗಿದೆ. ಉತ್ಪಾದನಾ ವೆಚ್ಚ ಏರಿಕೆಯಿಂದ ಗ್ರಾಹಕರ ಮೇಲೂ ಪರಿಣಾಮ ಬೀಳುವ ಸಾಧ್ಯತೆಯಿದೆ.
ಮುಂಗಾರು ಮಳೆ ಸಾಮಾನ್ಯವಾಗಿದ್ದರೆ ಮುಂದಿನ ತಿಂಗಳುಗಳಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಾಗಿ ಬೆಲೆಗಳಲ್ಲಿ ಸ್ವಲ್ಪ ಸ್ಥಿರತೆ ಕಾಣಬಹುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಜಾಗತಿಕ ಪೂರೈಕೆ ಪರಿಸ್ಥಿತಿ ಹಾಗೂ ಹವಾಮಾನ ಅಂಶಗಳು ಮುಂದಿನ ದಿನಗಳ ಬೆಲೆ ಪ್ರವೃತ್ತಿಯನ್ನು ನಿರ್ಧರಿಸಲಿವೆ.
ಈ ನಡುವೆ ರಬ್ಬರ್ ಬೆಳೆಗಾರರು ಕೂಡಾ ಸಮಸ್ಯೆ ಎದುರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದ ಕಾರಣದಿಂದ ಇಳುವರಿಯಲ್ಲೂ ಕುಸಿತ ಕಂಡಿದೆ. ರಬ್ಬರ್ ಹಾಲು ಇಳುವರಿಯಲ್ಲಿ ಗಣನೀಯ ಏರುಪೇರು ಕಂಡುಬರುತ್ತಿದೆಯಲ್ಲದೆ, ಮಳೆ ಹಾಗೂ ಬಿಸಿಲು ಸಮಸ್ಯೆಯಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Natural rubber prices have touched a record high of ₹263 per kg due to global supply shortages, adverse weather conditions and rising demand from the tyre industry. While farmers stand to benefit from higher prices, manufacturers face increased production costs and margin pressures
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…