Advertisement
ಸುದ್ದಿಗಳು

Rubber Market | ರಬ್ಬರ್‌ ಬೆಲೆ ಕುಸಿತ | ರಬ್ಬರ್‌ ಬೆಳೆಗಾರರಿಗೆ ಇನ್ನು ಸಂಕಷ್ಟ |

Share

ದೇಶದಲ್ಲಿ ರಬ್ಬರ್‌(Rubber) ಬೆಲೆ ಕುಸಿಯುತ್ತಿದೆ. ಅದಲ್ಲೂ ರಬ್ಬರ್‌ ಲ್ಯಾಟೆಕ್ಸ್‌ ದರ ಗಣನೀಯವಾಗಿ ಇಳಿಕೆ ಕಂಡಿದೆ. ಪ್ರತಿ ಕೆಜಿಗೆ 185 ರೂ.ಗೆ ತಲುಪಿದ್ದ ರಬ್ಬರ್ ಲ್ಯಾಟೆಕ್ಸ್‌ (Latex) ದರ ಈಗ ಗಣನೀಯವಾಗಿ ಕುಸಿತ ಕಂಡಿದೆ. ರಬ್ಬರ್‌ ಶೀಟ್‌ ಧಾರಣೆಯೂ ಇಳಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ರಬ್ಬರ್‌ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇನ್ನು ರಬ್ಬರ್‌ ಉತ್ಪಾದನೆಯ ಸಮಯವಾದ್ದರಿಂದ ಬೆಳೆಗಾರರು ಈಗಾಗಲೇ ಕೇರಳದಲ್ಲಿ ಪ್ರತಿಭಟನೆಯ ಹಾದಿಯಲ್ಲಿದ್ದಾರೆ.

ಈ ಹಿಂದೆ ಕೇರಳ ಸೇರಿದಂತೆ ವಿವಿದೆಡೆ ರಬ್ಬರ್ ಶೀಟ್‌ಗಳನ್ನು ಮಾರಾಟ ಮಾಡುವ ಬದಲು, ಅನೇಕ ರೈತರು ಲ್ಯಾಟೆಕ್ಸ್‌ ಮೂಲಕ ರಬ್ಬರ್‌ ಮಾರಾಟ ಮಾಡುತ್ತಿದ್ದರು. ವೆಚ್ಚಗಳ ಕೊರತೆಯ ನಿರ್ವಹಣೆಯನ್ನು ಮಾಡುವ ಉದ್ದೇಶದಿಂದ ಹಾಗೂ ರಬ್ಬರ್‌ ಲ್ಯಾಟೆಕ್ಸ್‌ಗೆ ಬೇಡಿಕೆ ಇದ್ದುದರಿಂದಲೂ ಬೆಳೆಗಾರರು ಈ ಮಾರ್ಗವನ್ನು ಅನುಸರಿಸಿದ್ದರು. ಆದರೆ ಇದೀಗ ಗಣನೀಯವಾಗಿ ರಬ್ಬರ್‌ ಲ್ಯಾಟೆಕ್ಸ್‌ ಹಾಗೂ ರಬ್ಬರ್‌ ಶೀಟ್‌ ಧಾರಣೆ ಇಳಿಕೆಯಾಗಿದೆ.

ಕೊರೋನಾ ಸಮಯದಲ್ಲಿ ಮಾಸ್ಕ್‌ ಹಾಗೂ ಗ್ಲೌಸ್‌ಗಳ ಅಗತ್ಯ ಹಾಗೂ ಬೇಡಿಕೆ ಹೆಚ್ಚಾಗಿತ್ತು. ಈ ಸಂದರ್ಭ ರಬ್ಬರ್‌ ಲ್ಯಾಟೆಕ್ಸ್‌ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಲ್ಯಾಟೆಕ್ಸ್ ಬೇಡಿಕೆ ಹಾಗೂ ಬೆಲೆ ಹೆಚ್ಚಾಗಿತ್ತು. ಕೊರೋನಾ ನಂತರ ಲ್ಯಾಟೆಕ್ಸ್‌ನ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಯಿತು ಮತ್ತು ಆದ್ದರಿಂದ ಈಗ ಲಾಟೆಕ್ಸ್‌ ಬೇಡಿಕೆ ಕಡಿಮೆಯಾಯಿತು. ಈಗ ರಬ್ಬರ್‌ ಶೀಟ್‌ ಧಾರಣೆಯೂ ಇಲ್ಲವಾಗಿರುವುದು  ಬೆಳೆಗಾರರಿಗೆ ಸಂಕಷ್ಟ ತಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago