MIRROR FOCUS

ಪರಿಸರ ಆಧಾರಿತ ಹೂಡಿಕೆಗಳಿಂದ 32 ಮಿಲಿಯನ್‌ ಉದ್ಯೋಗ ಸೃಷ್ಟಿ | ಹೊಸ ಅಧ್ಯಯನ ವರದಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪರಿಸರ ಆಧಾರಿತ ಮೂಲಸೌಕರ್ಯಗಳ ಒದಗಿಸುವಿಕೆ ಹಾಗೂ ಹೂಡಿಕೆಗಳನ್ನು ಮಾಡುವುದರಿಂದ  2030 ರ ವೇಳೆಗೆ 32 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ ಹಾಗೂ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಇವರ ಹೊಸ ವರದಿ ಹೇಳಿದೆ.

Advertisement
Advertisement

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಪರಿಸರ ಆಧಾರಿತ ಪರಿಹಾರ ಕ್ರಮಗಳ ಬಗೆಗಿನ ಸಮ್ಮೇಳನದಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಪ್ರಸ್ತುತ, 60 ಮಿಲಿಯನ್‌ಗಿಂತಲೂ ಹೆಚ್ಚು ಜನರು ಪರಿಸರ ಆಧಾರಿತವಾದ ಚಟುವಟಿಕೆಗಳಲ್ಲಿ ಜಾಗತಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇವರು ನೈಸರ್ಗಿಕ ವ್ಯವಸ್ಥೆ , ಗಾಳಿ, ನೀರು, ಮಣ್ಣು, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು, ಸಂರಕ್ಷಿಸಲು ಹೀಗೇ ಹಲವಾರು  ವಿಧಾನಗಳ ಮೂಲಕ ಪರಿಸರ ಉಳಿವಿನ ಕೆಲಸವನ್ನು ಮಾಡುತ್ತಿದ್ದಾರೆ.

ಮುಂದಿನ ದಿನಗಳನ್ನು ಯಾವುದೇ ಹೂಡಿಕೆಗಳನ್ನು, ಮೂಲಸೌಕರ್ಯಗಳನ್ನು ಒದಗಿಸುವ ವೇಳೆ  ಪರಿಸರ ಆಧಾರಿತ ಹೂಡಿಕೆಗಳನ್ನು ಮಾಡುವ ಮೂಲಕ  ಜಾಗತಿಕವಾಗಿ 32 ಮಿಲಿಯನ್ ಉದ್ಯೋಗಗಳನ್ನು ಹೆಚ್ಚಿಸಬಹುದು. ನಮ್ಮ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಸಮರ್ಥವಾಗಿ  ಕೆಲಸ ನಿರ್ವಹಿಸುವಲ್ಲಿ ಯೋಗ್ಯವಾದ ಕೆಲಸಗಳ ಅಗತ್ಯ ಇದೆ. ಅದಕ್ಕೆ  ಪ್ರಾಮುಖ್ಯತೆ ನೀಡುವ ಕುರಿತು ಜಾಗತಿಕವಾಗಿ ಯೋಚಿಸಬೇಕಾಗಿದೆ. ಹೀಗಾಗಿ ಪರಿಸರ ಆಧಾರಿತ ಹೂಡಿಕೆ ಅಥವಾ ಕೆಲಸ ಮಾಡುವಾಗ ಮತ್ತು ಕಾರ್ಯಗತಗೊಳಿಸುವಾಗ  ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ನೀತಿ ನಿರೂಪಕರು ಮಾರ್ಗದರ್ಶನ ನೀಡಬೇಕಾಗಿದೆ. ಏಕೆಂದರೆ ಭವಿಷ್ಯದಲ್ಲಿ ಪರಿಸರ ಹಾಗೂ ಹವಾಮಾನದ ಬಗ್ಗೆ ಅತ್ಯಂತ ಕಾಳಜಿಯೂ ಅಗತ್ಯ ಇದೆ ಎನ್ನುವುದು ಸಂವಾದದಲ್ಲಿ ಚರ್ಚಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

14 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

15 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

15 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

16 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

16 hours ago