Advertisement
MIRROR FOCUS

ಪರಿಸರ ಆಧಾರಿತ ಹೂಡಿಕೆಗಳಿಂದ 32 ಮಿಲಿಯನ್‌ ಉದ್ಯೋಗ ಸೃಷ್ಟಿ | ಹೊಸ ಅಧ್ಯಯನ ವರದಿ |

Share

ಪರಿಸರ ಆಧಾರಿತ ಮೂಲಸೌಕರ್ಯಗಳ ಒದಗಿಸುವಿಕೆ ಹಾಗೂ ಹೂಡಿಕೆಗಳನ್ನು ಮಾಡುವುದರಿಂದ  2030 ರ ವೇಳೆಗೆ 32 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ ಹಾಗೂ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಇವರ ಹೊಸ ವರದಿ ಹೇಳಿದೆ.

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಪರಿಸರ ಆಧಾರಿತ ಪರಿಹಾರ ಕ್ರಮಗಳ ಬಗೆಗಿನ ಸಮ್ಮೇಳನದಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಪ್ರಸ್ತುತ, 60 ಮಿಲಿಯನ್‌ಗಿಂತಲೂ ಹೆಚ್ಚು ಜನರು ಪರಿಸರ ಆಧಾರಿತವಾದ ಚಟುವಟಿಕೆಗಳಲ್ಲಿ ಜಾಗತಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇವರು ನೈಸರ್ಗಿಕ ವ್ಯವಸ್ಥೆ , ಗಾಳಿ, ನೀರು, ಮಣ್ಣು, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು, ಸಂರಕ್ಷಿಸಲು ಹೀಗೇ ಹಲವಾರು  ವಿಧಾನಗಳ ಮೂಲಕ ಪರಿಸರ ಉಳಿವಿನ ಕೆಲಸವನ್ನು ಮಾಡುತ್ತಿದ್ದಾರೆ.

ಮುಂದಿನ ದಿನಗಳನ್ನು ಯಾವುದೇ ಹೂಡಿಕೆಗಳನ್ನು, ಮೂಲಸೌಕರ್ಯಗಳನ್ನು ಒದಗಿಸುವ ವೇಳೆ  ಪರಿಸರ ಆಧಾರಿತ ಹೂಡಿಕೆಗಳನ್ನು ಮಾಡುವ ಮೂಲಕ  ಜಾಗತಿಕವಾಗಿ 32 ಮಿಲಿಯನ್ ಉದ್ಯೋಗಗಳನ್ನು ಹೆಚ್ಚಿಸಬಹುದು. ನಮ್ಮ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಸಮರ್ಥವಾಗಿ  ಕೆಲಸ ನಿರ್ವಹಿಸುವಲ್ಲಿ ಯೋಗ್ಯವಾದ ಕೆಲಸಗಳ ಅಗತ್ಯ ಇದೆ. ಅದಕ್ಕೆ  ಪ್ರಾಮುಖ್ಯತೆ ನೀಡುವ ಕುರಿತು ಜಾಗತಿಕವಾಗಿ ಯೋಚಿಸಬೇಕಾಗಿದೆ. ಹೀಗಾಗಿ ಪರಿಸರ ಆಧಾರಿತ ಹೂಡಿಕೆ ಅಥವಾ ಕೆಲಸ ಮಾಡುವಾಗ ಮತ್ತು ಕಾರ್ಯಗತಗೊಳಿಸುವಾಗ  ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ನೀತಿ ನಿರೂಪಕರು ಮಾರ್ಗದರ್ಶನ ನೀಡಬೇಕಾಗಿದೆ. ಏಕೆಂದರೆ ಭವಿಷ್ಯದಲ್ಲಿ ಪರಿಸರ ಹಾಗೂ ಹವಾಮಾನದ ಬಗ್ಗೆ ಅತ್ಯಂತ ಕಾಳಜಿಯೂ ಅಗತ್ಯ ಇದೆ ಎನ್ನುವುದು ಸಂವಾದದಲ್ಲಿ ಚರ್ಚಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

32 minutes ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

3 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

11 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago