Advertisement
MIRROR FOCUS

ಪರಿಸರ ಆಧಾರಿತ ಹೂಡಿಕೆಗಳಿಂದ 32 ಮಿಲಿಯನ್‌ ಉದ್ಯೋಗ ಸೃಷ್ಟಿ | ಹೊಸ ಅಧ್ಯಯನ ವರದಿ |

Share

ಪರಿಸರ ಆಧಾರಿತ ಮೂಲಸೌಕರ್ಯಗಳ ಒದಗಿಸುವಿಕೆ ಹಾಗೂ ಹೂಡಿಕೆಗಳನ್ನು ಮಾಡುವುದರಿಂದ  2030 ರ ವೇಳೆಗೆ 32 ಮಿಲಿಯನ್ ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಎಂದು ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ ಹಾಗೂ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಇವರ ಹೊಸ ವರದಿ ಹೇಳಿದೆ.

Advertisement

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಪರಿಸರ ಆಧಾರಿತ ಪರಿಹಾರ ಕ್ರಮಗಳ ಬಗೆಗಿನ ಸಮ್ಮೇಳನದಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಪ್ರಸ್ತುತ, 60 ಮಿಲಿಯನ್‌ಗಿಂತಲೂ ಹೆಚ್ಚು ಜನರು ಪರಿಸರ ಆಧಾರಿತವಾದ ಚಟುವಟಿಕೆಗಳಲ್ಲಿ ಜಾಗತಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇವರು ನೈಸರ್ಗಿಕ ವ್ಯವಸ್ಥೆ , ಗಾಳಿ, ನೀರು, ಮಣ್ಣು, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು, ಸಂರಕ್ಷಿಸಲು ಹೀಗೇ ಹಲವಾರು  ವಿಧಾನಗಳ ಮೂಲಕ ಪರಿಸರ ಉಳಿವಿನ ಕೆಲಸವನ್ನು ಮಾಡುತ್ತಿದ್ದಾರೆ.

ಮುಂದಿನ ದಿನಗಳನ್ನು ಯಾವುದೇ ಹೂಡಿಕೆಗಳನ್ನು, ಮೂಲಸೌಕರ್ಯಗಳನ್ನು ಒದಗಿಸುವ ವೇಳೆ  ಪರಿಸರ ಆಧಾರಿತ ಹೂಡಿಕೆಗಳನ್ನು ಮಾಡುವ ಮೂಲಕ  ಜಾಗತಿಕವಾಗಿ 32 ಮಿಲಿಯನ್ ಉದ್ಯೋಗಗಳನ್ನು ಹೆಚ್ಚಿಸಬಹುದು. ನಮ್ಮ ಪರಿಸರ ವ್ಯವಸ್ಥೆಗಳನ್ನು ರಕ್ಷಿಸಲು ಸಮರ್ಥವಾಗಿ  ಕೆಲಸ ನಿರ್ವಹಿಸುವಲ್ಲಿ ಯೋಗ್ಯವಾದ ಕೆಲಸಗಳ ಅಗತ್ಯ ಇದೆ. ಅದಕ್ಕೆ  ಪ್ರಾಮುಖ್ಯತೆ ನೀಡುವ ಕುರಿತು ಜಾಗತಿಕವಾಗಿ ಯೋಚಿಸಬೇಕಾಗಿದೆ. ಹೀಗಾಗಿ ಪರಿಸರ ಆಧಾರಿತ ಹೂಡಿಕೆ ಅಥವಾ ಕೆಲಸ ಮಾಡುವಾಗ ಮತ್ತು ಕಾರ್ಯಗತಗೊಳಿಸುವಾಗ  ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ನೀತಿ ನಿರೂಪಕರು ಮಾರ್ಗದರ್ಶನ ನೀಡಬೇಕಾಗಿದೆ. ಏಕೆಂದರೆ ಭವಿಷ್ಯದಲ್ಲಿ ಪರಿಸರ ಹಾಗೂ ಹವಾಮಾನದ ಬಗ್ಗೆ ಅತ್ಯಂತ ಕಾಳಜಿಯೂ ಅಗತ್ಯ ಇದೆ ಎನ್ನುವುದು ಸಂವಾದದಲ್ಲಿ ಚರ್ಚಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

21 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago