Advertisement
ಅನುಕ್ರಮ

ಪ್ರಕೃತಿಯೊಳಗಣ ನಡೆ ಏನು ಅದ್ಭುತವಪ್ಪಾ…!!

Share

ವಾವ್,  ಪ್ರಕೃತಿಯ ‌ಒಳಗಣ ನಡೆ ಏನು ಅದ್ಭುತವಪ್ಪಾ….!!

ಎಲ್ಲಿಂದಲೋ ಓಡೋಡಿ ಬರುವ ಮಾರುತಗಳು, ಅದನೇರಿ ಬರುವ ಮುಗಿಲ ಸಾಲುಗಳು…. ಇದರ ಹಿಂದಿನ ಲೆಕ್ಕಗಳ ಗ್ರಹಿಸಿ ಶಿರಸಿಯ ಸುಧಾಪುರದ. ಮುಂಡಿಗೆ ಕೆರೆಗಿಳಿದು ಸಂಸಾರದ ರಥವೇರುವ ಬೆಳ್ಳಕ್ಕಿಗಳು…. ವಾವ್…. ಯಾವುದೀ ಸಂಬಂಧ …. ಇದರ ಹೆಣೆದವನ್ಯಾರೋ……??

ಪಾಪ… ಈ ಬೆಳ್ಳಕ್ಕಿಗಳ ಅಂಗೈಯಲ್ಲಿ ಮನುಜರಂತೆ ವಾಟ್ಸಾಪೂ, ಸೆಟಲೈಟೂ ಅದೂ ಇದೂ ಎನ್ನುವ ಮಹದಾದ ಸೋ ಕಾಲ್ಡ್ ತಂತ್ರಜ್ಞಾನ ಏನಿಲ್ಲ….ಆದರೂ ಕರಾರುವಾಕ್ಕಾಗಿ ಮಳೆ ಬಂದು ಕೆರೆ ತುಂಬುವ ದಿನದ ಲೆಕ್ಕ ಈ ಬೆಳ್ಳಕ್ಕಿಗಳು ಮಾಡಬಲ್ಲವು….

ಮಾನವ ನಿರ್ಮಿತ ಸೆಟಲೈಟು ಲೆಕ್ಕ ತಪ್ಪೀತು, ಆದರೆ ಪ್ರಕೃತಿಯ ಮಡಿಲಲ್ಲೊಂದಾಗಿ ನಡೆವ ಮಾನವನ ಹೊರತಾದ ಜೀವಿಗಳೆಲ್ಲ ಲೆಕ್ಕ ಪರೀಕ್ಷೆಯಲ್ಲಿ ಸದಾ ಮುಂದೆಯೇ ಸರಿ. ಹಾಗಾದರೆ ಈ ಜ್ಞಾನ ಅಜ್ಞಾನಗಳ ಮದ್ಯದ ಆ ಶಕ್ತಿ ಯಾವುದಪ್ಪಾ….?

ಹುಮ್…!!

ಸಾವಿರಾರು ವರ್ಷಗಳ ಹಿಂದೆ, ವೇದಕಾಲದಲ್ಲಿ , ತಪೋನಿರತರಾದ ಮಾನವ ಸಾಧಕರೂ ಈ ಶಕ್ತಿಯ ರಹಸ್ಯ ಕಂಡುಕೊಂಡಿದ್ದರಲ್ಲಾ…. ಹೌದು.
ಕೇನೋಪನಿಷತ್ತಿನ ಸಾಲುಗಳಲ್ಲಿ … ಬರುವ ಗುರು ಶಿಷ್ಯ ಪ್ರಶ್ನೆ ಉತ್ತರಗಳ ಮಾಲೆಯಲ್ಲಿ ಈ ಶಕ್ತಿಯ ಬಗ್ಗೆ ಪ್ರಶ್ನೆಗಳ ಮೂಲಕ ವರ್ಣನೆ ಮಾಡಲಾಗಿದೆ.

ಕೇನೇಷಿತಂ ಪತತಿ ಪ್ರೇಷಿತಂ ಮನಃ
ಕೇನಃ ಪ್ರಥಮಃ ಪ್ರೈತಿಯುಕ್ತಃ
ಕೇನೇಷಿತಾಂ ವಾಚಮಿಮಾಮ್ ವದಂತಿ
ಚಕ್ಷು ಶ್ರೋತಂ ಕ ಉ ದೇವೋ ಯುನಕ್ತಿಃ…

ಅಂದರೆ…,

ಓ ಗುರುದೇವಾ..

ನನ್ನ ಮನಸಿನ ಆಲೋಚನಾ ಲಹರಿಯ ಪ್ರೇರಕನಾರು
ನನ್ನ ಮಾತಿನ,ದೃಷ್ಟಿಯ,ಶ್ರೋತೃಗುಣದ ಹಿಂದಿನ ಶಕ್ತಿ ಯಾರೋ
ಇದಕ್ಕೆಲ್ಲ ಶಕ್ತಿತುಂಬುವ ಪ್ರಾಣ ಪ್ರಥಮನಾರೂ

ಎಂಬುದಾಗಿ ಕೇಳಿದ ಶಿಷ್ಯನಿಗೆ ಗುರುವು…ತತ್ವಂ ಅಸಿ….ಇದು ಇಷ್ಟೇ… ಸರ್ವಂ ಖಲ್ವಿದಂ ಬ್ರಹ್ಮಾಸಿ…. ಅಂದರೆ…ನಿನ್ನನ್ನೂ ನನ್ನನ್ನೂ ಆವರಿಸಿ, ವ್ಯಾಪಿಸಿ ನಡೆಸುವ ಆ ಮಹತೋ ಶಕ್ತಿ ಅದೇ ಪರಮಾತ್ಮ… ಅಣುರೇಣು ತೃಣಕಾಯದಲೂ ಅವನದೇ ಛಾಯೇ ಎಂಬುದಾಗಿ‌ ಪ್ರಕೃತಿಗೆ ತಲೆಬಾಗುವ ಪಾಠವನ್ನು ಹೇಳುತ್ತಾರೆ ಅಂತೆಯೇ ಶಿಷ್ಯ ಪ್ರಕೃತಿಯ ಮದ್ಯದ ಜೀವನದಲ್ಲಿ ಸಂತೃಪ್ತನಾಗುತ್ತಾನೆ.

ಅಂತೆಯೇ … ಈ ಬೆಳ್ಲಕ್ಕಿಗಳಿಗೂ ದಾರಿದೀವಿಗೆಯಾದವನು ಆ ಪರಮಪುರುಷನೇ ಅಲ್ಲವೇ….

ಯಬ್ಬ, ಸಮಯಕ್ಕನುಗುಣವಾಗಿ ವಿಶ್ವ ಪಥವ ದಿಗ್ದರ್ಶಿಸುವ ಆತನ ಮೀರುವ ಪ್ರಯತ್ನ ಮಾಡುವವ ಮನುಜ ಮಾತ್ರರಲ್ಲವೇ… ಹಾಗಿದ್ದರೆ ತಾನು ತಿಳಿದ ಒಂದು ಕೊಂಡಿಯೇ ಸಂಪೂರ್ಣ ವಿಜ್ಞಾನ ಎಂದು ತಿಳಿದ ಮಾನವ ಯಾವ ಲೆಕ್ಕ… ಹಾಗಿದ್ದರೆ ಜ್ಞಾನ ಎಂದರೆ ಯಾವುದು…?

ಖಂಡಿತಾ… ನಾವು ತಿಳಿದ ವಿಜ್ಞಾನಕ್ಕಿಂತಲೂ ಮೇಲೆ ಒಂದು ಸುಜ್ಞಾನವೊಂದಿದೆ..ಅದರ ಅರಿವ ಸತ್ವ ನಮ್ಮದಾಗಬೇಕಿದೆ ಅಷ್ಟೇ

 

# ಟಿ ಆರ್‌ ಸುರೇಶ್ಚಂದ್ರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

19 minutes ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

5 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

14 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago