Advertisement
ಸುದ್ದಿಗಳು

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

Share

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ ಮಾಡುವುದಕ್ಕೆ ಮನಸ್ಸಿಲ್ಲ. ದುಃಖ ಬೇಡ, ಆದರೆ ದುಃಖದ ಮೂಲವಾದ ಪಾಪ ಮಾಡುವುದನ್ನು ನಿಲ್ಲಿಸುವುದಿಲ್ಲ. ಇದು ಬದಲಾಗಿ ಪುಣ್ಯದ ಕಾರ್ಯದಲ್ಲಿ ಮನಸ್ಸು, ದುಃಖದಿಂದ ದೂರವಿರುವ ಕಾರ್ಯ ಮಾಡುವಂತಾಗಲು ಇರುವ ದಾರಿ ಒಂದೇ. ಅದು ಜಗನ್ಮಾತೆಯಾದ ರಾಜರಾಜೇಶ್ವರಿಯ ಧ್ಯಾನ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸೋಮವಾರ ಸಾಗರದ ರಾಘವೇಶ್ವರ ಸಭಾಭವನದಲ್ಲಿ ಆರಂಭಗೊಂಡ ‘ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಶ್ರೀ ಲಲಿತಾ ದೇವಿಯ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪೂಜೆಗೆ ಚಾಲನೆ ನೀಡಿದ ಅವರು, ನಂತರ ಲಲಿತೋಪಾಖ್ಯಾನ ಪ್ರವಚನವನ್ನು ಅನುಗ್ರಹಿಸಿದರು.

ಕೇವಲ ದೇವಿಯ ಸ್ತುತಿಗೆ ಮುಂದಾಗಬೇಕು ಎಂದು ಮನಸ್ಸು ಮಾಡಿದಾಕ್ಷಣಕ್ಕೆ ನಾವು ಮಾಡಿದ ಪಾಪಗಳ ಪರಿಹಾರ ಸಾಧ್ಯವಾಗಲಿದೆ ಎನ್ನುವುದಾದರೆ, ಇನ್ನು ನಿಜವಾಗಿಯೂ ಶ್ರದ್ಧಾಭಕ್ತಿಯಿಂದ ಆಕೆಯ ಆರಾಧನೆಯಲ್ಲಿ ತೊಡಗಿದಾಗ ಸಿಗಬಹುದಾದ ಪುಣವೆಷ್ಟು ಎಂಬ ಸಂಗತಿ ಊಹೆಗೂ ನಿಲುಕಲಾರದು. ಮಾತ್ರವಲ್ಲ ಆಕೆಯ ಆರಾಧನೆಯಿಂದ ಪಾಪಗಳೂ ಪುಣ್ಯವಾಗಿ ಪರಿವರ್ತನೆಗೊಳ್ಳುವಂಥ ಮಹತ್ವದ ಸಂಗತಿ ಆ ಪೂಜೆಯಲ್ಲಿದೆ. ಯಾವತ್ತೂ ಪೂಜೆಯ ಹಿಂದಿರಬಹುದಾದ ಮಹತ್ವವನ್ನ ಅರಿತು, ಆರಾಧಿಸಬೇಕು. ಪೂಜೆಯಲ್ಲಿ ಬಳಸುವ ಮಂತ್ರದ ಮೂಲ ಅಂತಹ ಶಕ್ತಿಯನ್ನು ಹೊಂದಿದೆ. ಅದೂ ಮೂಲ. ಹಾಗಾಗಿ ಎಂದೂ ಕೂಡ ಮೂಲವನ್ನು ಮರೆಯಬಾರದು. ಅದು ವೃಕ್ಷಕ್ಕೆ ಬೇರಿದ್ದಂತೆ. ಅದನ್ನು ತೋರುವ ಕಾರ್ಯವನ್ನು ಗುರು ಮಾಡುತ್ತಾನೆ. ಜಗತ್ತಿಗೆ ನೆಮ್ಮದಿ ನೀಡುವ ಉದ್ದೇಶದ ಇಂತಹ ಕಾರ್ಯಗಳಿಗಾಗಿಯೇ ಹಿಂದೆ ಋಷಿ ಮುನಿಗಳು, ತಪಸ್ವಿಗಳು ಇಂಥ ಜ್ಞಾನವನ್ನು ಹುಡುಕಿದವರು. ಅದನ್ನು ಅರಿಯಬೇಕಾದರೆ ಗುರುವಿನ ಕುರಿತಾದ ಅರಿವಿರಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಸೋಮವಾರ ಬೆಳಗ್ಗೆ ನವರಾತ್ರ ನಮಸ್ಯಾದ ಪುಣ್ಯಾಹವಾಚನೆ, ಮಹಾಸಂಕಲ್ಪ, ಯೋಗನಿದ್ರಾ ದೇವಿ ಉಪಾಸನೆ, ದುರ್ಗಾ ಹವನ, ಚಂಡಿಕಾ ಹವನ, ಲಲಿತಾ ಮೂರ್ತಿ ಪ್ರತಿಷ್ಟಾಪನೆ, ಮಾತೆಯರಿಂದ ಕುಂಕುಮಾರ್ಚನೆ, ಉಡಿ ಸಮರ್ಪಣೆ, ಸ್ತೋತ್ರ ಪಠಣ, ಭಜನೆ ನೆರವೇರಿತು.

ಸಮಾಜ ಸಂಭ್ರಮ :  ನವರಾತ್ರ ನಮಸ್ಯಾ ಅಂಗವಾಗಿ ಸಮಿತಿಯು ಆಯೊಜಿಸಿದ್ದ ಸಮಾಜ ಸಂಭ್ರಮದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ ಪ್ರಭು, ವೈಷ್ಯವಾಣಿ ಸಮಾಜದ ಅಧ್ಯಕ್ಷ ಸತ್ಯನಾರಾಯಣರನ್ನು ಸಮಾಜದ ಪರವಾಗಿ ಗೌರವಿಸಲಾಯಿತು. ಸಂಜೆ ದುರ್ಗಾದೀಪ ನಮಸ್ಕಾರ, ಶ್ರೀ ರಾಜರಾಜೇಶ್ವರಿ ಪೂಜೆ ನೆರವೇರಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

5 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

5 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

13 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

14 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

23 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago