Advertisement
ಸುದ್ದಿಗಳು

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

Share

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ ಮಾಡುವುದಕ್ಕೆ ಮನಸ್ಸಿಲ್ಲ. ದುಃಖ ಬೇಡ, ಆದರೆ ದುಃಖದ ಮೂಲವಾದ ಪಾಪ ಮಾಡುವುದನ್ನು ನಿಲ್ಲಿಸುವುದಿಲ್ಲ. ಇದು ಬದಲಾಗಿ ಪುಣ್ಯದ ಕಾರ್ಯದಲ್ಲಿ ಮನಸ್ಸು, ದುಃಖದಿಂದ ದೂರವಿರುವ ಕಾರ್ಯ ಮಾಡುವಂತಾಗಲು ಇರುವ ದಾರಿ ಒಂದೇ. ಅದು ಜಗನ್ಮಾತೆಯಾದ ರಾಜರಾಜೇಶ್ವರಿಯ ಧ್ಯಾನ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸೋಮವಾರ ಸಾಗರದ ರಾಘವೇಶ್ವರ ಸಭಾಭವನದಲ್ಲಿ ಆರಂಭಗೊಂಡ ‘ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಶ್ರೀ ಲಲಿತಾ ದೇವಿಯ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪೂಜೆಗೆ ಚಾಲನೆ ನೀಡಿದ ಅವರು, ನಂತರ ಲಲಿತೋಪಾಖ್ಯಾನ ಪ್ರವಚನವನ್ನು ಅನುಗ್ರಹಿಸಿದರು.

ಕೇವಲ ದೇವಿಯ ಸ್ತುತಿಗೆ ಮುಂದಾಗಬೇಕು ಎಂದು ಮನಸ್ಸು ಮಾಡಿದಾಕ್ಷಣಕ್ಕೆ ನಾವು ಮಾಡಿದ ಪಾಪಗಳ ಪರಿಹಾರ ಸಾಧ್ಯವಾಗಲಿದೆ ಎನ್ನುವುದಾದರೆ, ಇನ್ನು ನಿಜವಾಗಿಯೂ ಶ್ರದ್ಧಾಭಕ್ತಿಯಿಂದ ಆಕೆಯ ಆರಾಧನೆಯಲ್ಲಿ ತೊಡಗಿದಾಗ ಸಿಗಬಹುದಾದ ಪುಣವೆಷ್ಟು ಎಂಬ ಸಂಗತಿ ಊಹೆಗೂ ನಿಲುಕಲಾರದು. ಮಾತ್ರವಲ್ಲ ಆಕೆಯ ಆರಾಧನೆಯಿಂದ ಪಾಪಗಳೂ ಪುಣ್ಯವಾಗಿ ಪರಿವರ್ತನೆಗೊಳ್ಳುವಂಥ ಮಹತ್ವದ ಸಂಗತಿ ಆ ಪೂಜೆಯಲ್ಲಿದೆ. ಯಾವತ್ತೂ ಪೂಜೆಯ ಹಿಂದಿರಬಹುದಾದ ಮಹತ್ವವನ್ನ ಅರಿತು, ಆರಾಧಿಸಬೇಕು. ಪೂಜೆಯಲ್ಲಿ ಬಳಸುವ ಮಂತ್ರದ ಮೂಲ ಅಂತಹ ಶಕ್ತಿಯನ್ನು ಹೊಂದಿದೆ. ಅದೂ ಮೂಲ. ಹಾಗಾಗಿ ಎಂದೂ ಕೂಡ ಮೂಲವನ್ನು ಮರೆಯಬಾರದು. ಅದು ವೃಕ್ಷಕ್ಕೆ ಬೇರಿದ್ದಂತೆ. ಅದನ್ನು ತೋರುವ ಕಾರ್ಯವನ್ನು ಗುರು ಮಾಡುತ್ತಾನೆ. ಜಗತ್ತಿಗೆ ನೆಮ್ಮದಿ ನೀಡುವ ಉದ್ದೇಶದ ಇಂತಹ ಕಾರ್ಯಗಳಿಗಾಗಿಯೇ ಹಿಂದೆ ಋಷಿ ಮುನಿಗಳು, ತಪಸ್ವಿಗಳು ಇಂಥ ಜ್ಞಾನವನ್ನು ಹುಡುಕಿದವರು. ಅದನ್ನು ಅರಿಯಬೇಕಾದರೆ ಗುರುವಿನ ಕುರಿತಾದ ಅರಿವಿರಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಸೋಮವಾರ ಬೆಳಗ್ಗೆ ನವರಾತ್ರ ನಮಸ್ಯಾದ ಪುಣ್ಯಾಹವಾಚನೆ, ಮಹಾಸಂಕಲ್ಪ, ಯೋಗನಿದ್ರಾ ದೇವಿ ಉಪಾಸನೆ, ದುರ್ಗಾ ಹವನ, ಚಂಡಿಕಾ ಹವನ, ಲಲಿತಾ ಮೂರ್ತಿ ಪ್ರತಿಷ್ಟಾಪನೆ, ಮಾತೆಯರಿಂದ ಕುಂಕುಮಾರ್ಚನೆ, ಉಡಿ ಸಮರ್ಪಣೆ, ಸ್ತೋತ್ರ ಪಠಣ, ಭಜನೆ ನೆರವೇರಿತು.

ಸಮಾಜ ಸಂಭ್ರಮ :  ನವರಾತ್ರ ನಮಸ್ಯಾ ಅಂಗವಾಗಿ ಸಮಿತಿಯು ಆಯೊಜಿಸಿದ್ದ ಸಮಾಜ ಸಂಭ್ರಮದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ ಪ್ರಭು, ವೈಷ್ಯವಾಣಿ ಸಮಾಜದ ಅಧ್ಯಕ್ಷ ಸತ್ಯನಾರಾಯಣರನ್ನು ಸಮಾಜದ ಪರವಾಗಿ ಗೌರವಿಸಲಾಯಿತು. ಸಂಜೆ ದುರ್ಗಾದೀಪ ನಮಸ್ಕಾರ, ಶ್ರೀ ರಾಜರಾಜೇಶ್ವರಿ ಪೂಜೆ ನೆರವೇರಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

2 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

2 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

13 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

13 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

18 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

19 hours ago